ಬಾಗಲಕೋಟೆ: ಗುಳೇದಗುಡ್ಡ ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಜೋಕುಮಾರನನ್ನು ಕೂರಿಸಿಕೊಂಡು ಆರಾಧನೆ ಮಾಡುತ್ತಿದ್ದಾರೆ.ಉತ್ತರ ಕರ್ನಾಟಕದ ಪ್ರಮುಖ ಜಾನಪದ ದೇವರು ಜೋಕುಮಾರನ ಕುರಿತು ಅನೇಕ ಕಥೆಗಳಿವೆ. ಬೆನಕನ ಅಮಾವಾಸ್ಯೆಯ ನಂತರ ಏಳನೇ ದಿನ ಜೋಕುಮಾರನ ಹಬ್ಬ ಆರಂಭವಾಗುತ್ತದೆ. ಈ ಭಾಗದ ಜನರು ಉತ್ತಮ ಮಳೆ, ಬೆಳೆ ಮತ್ತು ಸಮೃದ್ಧಿಯ ನಿಮಿತ್ತ ಜೋಕುಮಾರನನ್ನು ಪೂಜಿಸುತ್ತಾರೆ. ಇದನ್ನೂ ಓದಿ:  ಫೋನಿನಲ್ಲಿ ಮಾತಾಡ್ಕೊಂಡು ಒನ್ ವೇನಲ್ಲಿ ಬಂದು ಮತ್ತೊಬ್ಬನ ಕೈ ಕಟ್ ಮಾಡಿದ!ಗಣೇಶನನ್ನು ಪ್ರತಿಷ್ಠಾಪಿಸಿದ ನಾಲ್ಕನೆಯ ದಿನಕ್ಕೆ ಜನ್ಮ ತಾಳುವ ಜೋಕುಮಾರನನ್ನು ಮಹಿಳೆಯರು ಮಣ್ಣಿನ ಮೂರ್ತಿಯಾಗಿ ರೂಪಿಸುತ್ತಾರೆ. ನಂತರ ಹೊಸ ಬಿದಿರಿನ ಬುಟ್ಟಿಯಲ್ಲಿ ಜೋಕುಮಾರನ ಪ್ರತಿಷ್ಠಾಪಿಸುತ್ತಾರೆ. ಬೇವಿನ ಎಲೆಗಳಿಂದ ಶೃಂಗರಿಸುತ್ತಾರೆ. ನಂತರ ಮಹಿಳೆಯರು ಬುಟ್ಟಿಯನ್ನು ತಲೆಯ ಮೇಲಿಟ್ಟುಕೊಂಡು ಊರಿನ ಪ್ರಮುಖ ಗಲ್ಲಿಗಳಿಗೆ ಹೊತ್ತುಕೊಂಡು ಹೋಗುತ್ತಾರೆ. ಮನೆಯ ಕಟ್ಟೆಯ ಮೇಲಿಟ್ಟು ಜೋಕುಮಾರನ ಹಾಡುಗಳ ಹಾಡುತ್ತಾರೆ.ಈ ಜೋಕುಮಾರನ ಹಾಡುಗಳು ಜಾನಪದ ಶೈಲಿಯಲ್ಲಿವೆ. ಈ ಎಲ್ಲ ಹಾಡುಗಳನ್ನು ಓದಲು ಬರೆಯಲು ಬಾರದ ಮಹಿಳೆಯರು ಸಹ ಹಾಡುತ್ತಾರೆ. ಈ ಹಾಡುಗಳಿಗೆ ಅದರದೇ ಆದ ಪದ್ಧತಿ ಇದೆ. ಈ ಹಾಡುಗಳು ಕೂಡ ಅತ್ಯಂತ ವಿಶಿಷ್ಠವಾಗಿವೆ. ಇದನ್ನೂ ಓದಿ:  6 ಎಕರೆ ಜಮೀನಿನ ಆಸೆಗಾಗಿ ತಮ್ಮನನ್ನೇ ಕೊಂದ ಪಾಪಿ ಅಣ್ಣ‘ಅಡ್ಡಡ್ಡ ಮಳೆ ಬಂದ, ದೊಡ್ಡ ದೊಡ್ಡ ಕೆರೆ ತುಂಬಿ, ಗೊಡ್ಡುಗಳೆಲ್ಲ ಹೈನಾಗಿ ಜೋಕುಮಾರ, ಮಡಿವಾಳರ ಕೇರಿ ಹೊಕ್ಕಾನ ಜೋಕುಮಾರ ಮುಡಿ ತುಂಬ ಹೂವ ಮುಡಿದಂತೆ ಚೆಲುವಿ ತನ್ನ ಮಡದಿಯಾಗೆಂದ ಸುಕುಮಾರ’- ಈ ರೀತಿಯ ವಿಶೇಷವಾದ ಹತ್ತಾರು ಹಾಡುಗಳನ್ನು ಹಾಡುತ್ತಾರೆ. ನಂತರ ಮೊರದಲ್ಲಿ ಅಕ್ಕಿ, ಜೋಳ, ಸಜ್ಜಿ, ಗೋಧಿ ಸೇರಿದಂತೆ ಆಹಾರ ಸಾಮಗ್ರಿಗಳನ್ನು ನೈವೇದ್ಯ ರೂಪದಲ್ಲಿ ನೀಡುತ್ತಾರೆ. ಜೋಕುಮಾರನ ತುಟಿಗೆ ಹಚ್ಚಲಾದ ಬೆಣ್ಣೆಯನ್ನು ಕಪ್ಪು ಮಣ್ಣಲ್ಲಿ ಮುಚ್ಚಿ ಬೇವಿನ ಎಲೆಗೆ ಹಚ್ಚಿ ಮೊರದಲ್ಲಿ ಪ್ರಸಾದದ ಜೊತೆಗೆ ನೀಡುತ್ತಾರೆ.






 Advertisement 




Sign in to your account
Username or Email Address


Password

 Remember Me


