ಬೆಂಗಳೂರು: ಜೆಡಿಎಸ್ ಶಾಸಕ ಸಾರಾ ಮಹೇಶ್ ಇಂದು ವಿಧಾನಸಭೆಯ ಬಾವಿಗೆ ಇಳಿದು ಧರಣಿ ನಡೆಸಿದ ಪ್ರಸಂಗ ನಡೆಯಿತು.ಅಧಿವೇಶನದ ವೇಳೆ ಮೈಸೂರಿನ ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಬಂದಿರುವ ಬ್ಯಾಗ್ ಖರೀದಿ ಅಕ್ರಮ ಆರೋಪ ಪ್ರಕರಣದ ಬಗ್ಗೆ ಚರ್ಚೆ ನಡೆಸಲು ಅನಮತಿ ಕೇಳಿದರು. ಇದನ್ನೂ ಓದಿ: 7 ಕೋಟಿ ಮೊತ್ತದ ಅಡಿಕೆಯ ಜೊತೆ 7 ಲಾರಿ ಜಪ್ತಿ – 7 ಮಂದಿ ಅರೆಸ್ಟ್ಸಾರಾ ಮಹೇಶ್ ಈಗಲೇ ಹಕ್ಕುಚ್ಯುತಿ ಸೂಚನೆಯ ಚರ್ಚೆ ನಡೆಸುವಂತೆ ಆಗ್ರಹಿಸಿದರು. ಆದರೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮತಿ ನೀಡಲಿಲ್ಲ. ಇದನ್ನೂ ಓದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಸಂಪೂರ್ಣ ನಿಷೇಧ ಆರೋಪ ಗಂಭೀರವಾಗಿದ್ದು ಚರ್ಚೆ ನಡೆಸಲು ಅನುಮತಿ ನೀಡಬೇಕೆಂದು ಆಗ್ರಹಿಸಿದ್ದರೂ ಸ್ಪೀಕರ್ ಒಪ್ಪಿಗೆ ನೀಡಲಿಲ್ಲ. ಹೀಗಾಗಿ ಚರ್ಚೆಗೆ ಪಟ್ಟು ಹಿಡಿದ ಸಾರಾ ಮಹೇಶ್ ಸದನದ ಬಾವಿಗಿಳಿದು ಧರಣಿ ನಡೆಸಿದರು. ಕೊನೆಗೆ ಸ್ಪೀಕರ್ ಕಾಗೇರಿ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ ಬಳಿಕ ಸಾರಾ ಮಹೇಶ್ ಧರಣಿಯನ್ನು ವಾಪಸ್ ಪಡೆದರು.Sign in to your account
Username or Email Address


Password

 Remember Me


