ಮಂಗಳೂರು: ಗಣೇಶ ಚತುರ್ಥಿಗೆ ಕೊರೊನಾ ಮಹಾಮಾರಿ ಅಡ್ಡಿಯಾಗಿದ್ದರೂ ಜನ ಗಣೇಶನ ದರ್ಶನ ಪಡೆಯಲು ದೇವಸ್ಥಾನಗಳಿಗೆ ತಂಡೋಪತಂಡವಾಗಿ ಆಗಿಮಿಸಿದ್ದರು. ನಗರದ ಪ್ರಸಿದ್ಧ ಕ್ಷೇತ್ರ ಶರವು ಮಹಾಗಣಪತಿ ದೇವಸ್ಥಾನಕ್ಕೆ ಭಕ್ತರು ಮುಂಜಾನೆಯಿಂದಲೇ ಬರಲಾರಂಭಿಸಿ, ಗಣೇಶನ ದರ್ಶನ ಪಡೆದರು.ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗಿರುವುದರಿಂದ ಕೋವಿಡ್ ನಿಯಮಗಳನ್ನು ಪಾಲಿಸಿ ಹಬ್ಬವನ್ನು ಆಚರಿಸಲು ಜಿಲ್ಲಾಡಳಿತ ಸೂಚಿಸಿದೆ. ಈ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಎಲ್ಲ ಕೊರೊನಾ ನಿಯಮವನ್ನು ಪಾಲಿಸಲಾಗಿದೆ. ಇದನ್ನೂ ಓದಿ: ನಿನ್ನ ವಾಹನದಿಂದ ಬೆಳೆ ಉಳಿಸು- ಗಣಪತಿಗೆ ಜೀವಂತ ಇಲಿ ನೀಡಿ ಬೇಡಿಕೊಂಡ ರೈತಭಕ್ತರು ಸಹ ಮಾಸ್ಕ್, ಸಾಮಾಜಿಕ ಅಂತರ ಪಾಲಿಸಿ, ಗಣೇಶನ ದರ್ಶನ ಪಡೆದರು. ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿರುವುದರಿಂದ ಗಡಿ ಚಿಲ್ಲೆ ದಕ್ಷಿಣ ಕನ್ನಡದಲ್ಲಿ ಸಹ ಕಟ್ಟೆಚ್ಚರ ವಹಿಸಲಾಗಿದೆ. ಇದರ ಮಧ್ಯೆಯೇ ಹಬ್ಬವನ್ನು ಆಚರಿಸಲಾಗುತ್ತಿದೆ.Sign in to your account
Username or Email Address


Password

 Remember Me


