ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಸುಬ್ರಮಣ್ಯನಗರದ ಈಸ್ಟ್ ವೆಸ್ಟ್ ಸ್ಕೂಲ್ ಬಳಿ ಕೆಂಗಲ್ ಹನುಮಂತಯ್ಯ ಟ್ರಸ್ಟ್ ಮತ್ತು ಮಲ್ಲೇಶ್ವರಂ ವಿಧಾನಸಭಾ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ ಪರಿಸರ ಸ್ನೇಹಿ 3,000 ಗಣೇಶ ಮೂರ್ತಿಗಳನ್ನು ಟ್ರಸ್ಟ್ ನ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಾದ ಪಾದರೇಣುರವರು ಮಕ್ಕಳಿಗೆ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಕೆಂಗಲ್ ಹನುಮಂತಯ್ಯ ಟ್ರಸ್ಟ್ ಅಧ್ಯಕ್ಷರಾದ ಪಾದರೇಣುರವರು ಮಾತನಾಡಿ, ಇಂದಿನ ಮಕ್ಕಳೇ ದೇಶದ ಮುಂದಿನ ಮುಂದಿನ ಉತ್ತಮ ಪ್ರಜೆಗಳಾಗಬೇಕು. ತಂದೆ, ತಾಯಿ ಮತ್ತು ಗುರುಗಳಿಗೆ ಗೌರವ ತರುವ ಹಾಗೇ ಉತ್ತಮ ನಡತೆ ಬೆಳೆಸಿಕೊಳ್ಳಬೇಕು. ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು ಎಂದರು. ಇದನ್ನೂ ಓದಿ: ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವಗಣೇಶ ಹಬ್ಬದ ಪ್ರಯುಕ್ತ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಗಾಯಿತ್ರಿನಗರ, ಸುಬ್ರಮಣ್ಯನಗರ ಮತ್ತು ಪ್ಯಾಲೇಸ್ ಗುಟ್ಟಹಳ್ಳಿ, ಅರಮನೆ ನಗರ, ಅಶ್ವಥ್ ನಗರ ಎಸ್.ಸಿ/ಎಸ್.ಟಿ ಕಾಲೋನಿ ಮಕ್ಕಳಿಗೆ 3 ಸಾವಿರ ಪರಿಸರ ಸ್ನೇಹಿ ಮತ್ತು ನೈಸರ್ಗಿಕ ಬಣ್ಣ ಬಳಸಿದ ಗಣೇಶ ಮೂರ್ತಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ದೋಚಲು ಹಣವಿಲ್ಲದಾಗ ಹಲ್ಲೆಗೈದು ರೇಪ್ ಮಾಡಿದೆವು – ಸತ್ಯ ಬಿಚ್ಚಿಟ್ಟ 7ನೇ ಆರೋಪಿ






 Advertisement 




Sign in to your account
Username or Email Address


Password

 Remember Me


