ದಾವಣಗೆರೆ: ಹರಿಹರ ನಗಾರಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಬೇಡಿಕೆ ಸಮೀಕ್ಷೆ ಮಾಡುವ ಹಿನ್ನೆಲೆಯಲ್ಲಿ ಅರ್ಜಿ ಆಹ್ವಾನಿಸಿದೆ. ಸೂರಿಗಾಗಿ ಆಸೆ ಪಡುತ್ತಿರುವ ಬಡ ಜನರ ಆಸೆಯನ್ನು ಬಂಡವಾಳ ಮಾಡಿಕೊಂಡಿರುವ ಕೆಲ ದಲ್ಲಾಳಿಗಳು ಒಂದು ಅರ್ಜಿ ಹಾಕಲು ನಾಲ್ಕೈದು ಸಾವಿರ ರೂಪಾಯಿ ಕೀಳುವ ದಂಧೆಗಿಳಿದಿದ್ದಾರೆ. ಇದೀಗ ದಲ್ಲಾಳಿಗಳು ದೂರವಾಣಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿರುವ ಆಡಿಯೋ ವೈರಲ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.ಈಗಾಗಲೇ ದೂಡಾ ನಿವೇಶನಗಳ ಬೇಡಿಕೆ ಸಮೀಕ್ಷೆ ನಡೆಸುತ್ತಿದ್ದು, ನಿವೇಶನಕ್ಕಾಗಿ ಅರ್ಜಿ ಕರೆಯಲಾಗಿದೆ. ಹಾಗಾಗಿ ಅರ್ಜಿ ಹಾಕೋಕೆ ಜನ ಮುಗಿ ಬಿದ್ದಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ದಲ್ಲಾಳಿಗಳು, ಸರದಿ ಸಾಲಲ್ಲಿ ನಿಲ್ಲದೇ ಅರ್ಜಿ ಹಾಕಲು ನಾಲ್ಕರಿಂದ ಐದು ಸಾವಿರ ರೂಪಾಯಿ ತನಕ ಹಣವನ್ನು ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂಬ ಅಂಶ ಬಯಲಾಗಿದೆ. ಇದನ್ನೂ ಓದಿ:ಮಗನಿಗೆ ರಾಯನ್ ಹೆಸರಿಟ್ಟಿದ್ದಕ್ಕೆ ಮೇಘನಾ ಸ್ಪಷ್ಟನೆಅರ್ಜಿದಾರರು ಬಾರದಿದ್ದರೂ ದಾಖಲೆ ನೀಡಿ ಹಣ ಕೊಟ್ಟರೆ, ಅವರ ಹೆಸರಿನಲ್ಲಿ ದಲ್ಲಾಳಿಗಳು ಹಾಗೂ ಅಲ್ಲಿನ ಅಧಿಕಾರಿಗಳ ಅಡ್ಜಸ್ಟ್‍ಮೆಂಟ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಈ ದಲ್ಲಾಳಿಗಳು ಅಧಿಕಾರಿಗಳನ್ನು ಒಳಗೆ ಹಾಕಿಕೊಂಡು, ಸರದಿ ಸಾಲಿನಲ್ಲಿ ನಿಲ್ಲದೆ ಎಲ್ಲಾ ಅರ್ಜಿಗಳನ್ನು ತೆಗೆದುಕೊಂಡು ನೇರವಾಗಿ ದೂಡಾ ಕಚೇರಿಯ ಕೌಂಟರ್ ಗೆ ತೆರಳಿ ಹಣ ನೀಡಿ ಅರ್ಜಿ ಹಾಕಿ ವ್ಯವಹಾರ ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:ಬಾಗಲಕೋಟೆಯಲ್ಲಿ ಭೂ ಕಂಪನದ ಅನುಭವ – ಜನರಲ್ಲಿ ಆತಂಕದಾವಣಗೆರೆ ನಗರದ ಕುಂದಾವಾಡ ರಸ್ತೆಯ ಬಳಿ ಇರುವ ಜೈನ್ ಕಾಲೋನಿ ಬಳಿ ಈ ವ್ಯವಹಾರ ನಡೆಯುತ್ತಿದೆ. ಅರ್ಜಿ ಹಾಕಲು ಬಯಸುವ ಜನ ಜೈನ್ ಕಾಲೋನಿ ಬಳಿ ಬಂದು ದುಡ್ಡು ಕೊಟ್ಟು ಸಂಜೆಯೊಳಗೆ ಸ್ವೀಕೃತಿ ಪತ್ರ ತೆಗೆದುಕೊಂಡು ಹೋಗಬಹುದು. ಇದು ದೂಡಾದಲ್ಲಿ ನಡೆಯುತ್ತಿರುವ ಡೈರೆಕ್ಟ್ ದಂಧೆ ಎಂಬ ಅನುಮಾನ ಕಾಡುತ್ತಿದೆ.20*30 ಅಳತೆಯ ನಿವೇಶನಕ್ಕೆ ಅರ್ಜಿ ಹಾಕಲು 3,000, 30*40 ನಿವೇಶನಕ್ಕೆ 3,500, 30*50 ನಿವೇಶನಕ್ಕೆ 4,300, 40*50 ನಿವೇಶನಕ್ಕೆ 4,800, 50*80 ನಿವೇಶನಕ್ಕೆ ಅರ್ಜಿ ಹಾಕಲು 5,000 ಹಣವನ್ನು ನಿಗದಿ ಮಾಡಲಾಗಿದ್ದು, ಅಮಾಯಕರಿಂದ ದಲ್ಲಾಳಿಗಳು ಹಣ ಪೀಕುತ್ತಿದ್ದಾರೆ. ಇದರಲ್ಲಿ ಬಹು ಪಾಲು ಹಣ ದೂಡಾದ ಕೆಲ ಸಿಬ್ಬಂದಿಗೆ ಹೋಗುತ್ತದೆ ಎಂಬ ಮಾಹಿತಿಯೂ ಆಡಿಯೋದಲ್ಲಿದೆ. ಇದನ್ನೂ ಓದಿ:ಮೈಸೂರಿನ ದರೋಡೆ, ಶೂಟ್‍ಔಟ್ ಪ್ರಕರಣ- ಖತರ್ನಾಕ್ ಬಾಂಬೆ ಬುಡ್ಡಾ ಅಂದರ್Sign in to your account
Username or Email Address


Password

 Remember Me


