ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ದೇವಸ್ಥಾನದ (Male Mahadeshwara Temple) ಹುಂಡಿಯಲ್ಲಿ 2 ಕೋಟಿ 58 ಲಕ್ಷ ರೂ.ಗಿಂತಲೂ ಹೆಚ್ಚು ಕಾಣಿಕೆ ಹಣ ಸಂಗ್ರಹವಾಗಿದೆ.ಮಹದೇಶ್ವರ ಬೆಟ್ಟದ ದೇವಸ್ಥಾನದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಮಾಡಲಾಗಿದ್ದು, ಭಕ್ತರು ಕಳೆದ ಮೂವತ್ತು ದಿನಗಳ ಅವಧಿಯಲ್ಲಿ ಮಹದೇಶ್ವರನಿಗೆ ನಗದು ರೂಪದಲ್ಲಿ ಒಟ್ಟು 2,58,44,097 ರೂ. ಕಾಣಿಕೆ ಸಮರ್ಪಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರದ ಅರಣ್ಯಗಳಲ್ಲಿ ಆನೆ ಗಣತಿ ಶುರು!ಇದರ ಜೊತೆಗೆ 93 ಗ್ರಾಂ ಚಿನ್ನ (Gold), 3 ಕೆಜಿ 350 ಗ್ರಾಂ ಬೆಳ್ಳಿಯನ್ನೂ ಸಹ ಭಕ್ತರು ಮಾದಪ್ಪನಿಗೆ ಅರ್ಪಿಸಿದ್ದಾರೆ. ಇದಲ್ಲದೇ ಸೌದಿ ಅರೇಬಿಯಾ, ಜಪಾನ್, ನೇಪಾಳ ಹಾಗೂ ಕತಾರ್ ದೇಶಗಳ ಕರೆನ್ಸಿ ನೋಟುಗಳು ಕಾಣಿಕೆ ಹುಂಡಿಯಲ್ಲಿ ಪತ್ತೆಯಾಗಿವೆ.ಸದ್ಯ ಇಲ್ಲದ 2,000 ರೂ. ಮುಖಬೆಲೆಯ 25 ನೋಟುಗಳು‌ ಸಹ ಹುಂಡಿಯಲ್ಲಿ ‌ಕಂಡುಬಂದಿವೆ. ಇದನ್ನೂ ಓದಿ: ಶ್ರೀನಿವಾಸಪ್ರಸಾದ್ ಬಿಜೆಪಿ ತೊರೆಯುವ ಯೋಚನೆ ಮಾಡಿರಲಿಲ್ಲ; `ಕೈ’ ವಿರುದ್ಧ ಸಿಡಿದ ಅಳಿಯ ಹರ್ಷವರ್ಧನ್!Sign in to your account
Username or Email Address


Password

 Remember Me


