ಕಾರವಾರ: ಗಣೇಶ ಚತುರ್ಥಿ ಬಂತು ಎಂದರೇ ಬಹುತೇಕ ಹಳ್ಳಿಗಳಲ್ಲಿ ಹಬ್ಬಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತವೆ. ಶಿರಸಿಯಲ್ಲಿ ಸಹಬಾಳ್ವೆ ಸಾರುವ ಕೈ ಚಕ್ಕುಲಿ ಕಂಬಳವನ್ನು ಮಾಡಲಾಗುತ್ತಿದೆ.ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಹಲವು ಗ್ರಾಮದಲ್ಲಿ ಊರಿನವರೆಲ್ಲಾ ಒಟ್ಟಿಗೆ ಸೇರಿ ಕೈ ನಿಂದ ಹೊಸೆದು ಮಾಡುವ ಚಕ್ಕುಲಿ ಕಂಬಳ ನಡೆಸುವ ಮೂಲಕ ಗ್ರಾಮದಲ್ಲಿ ತಮ್ಮ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಗೊಳಿಸಿಕೊಳ್ಳುತ್ತಾರೆ. ಇದನ್ನೂ ಓದಿ: ಆರ್ಚರಿ ಕಂಚಿನ ಪದಕ ಗೆದ್ದ ಹರ್ವಿಂದರ್ ಸಿಂಗ್ಕೈ ಚಕ್ಕುಲಿ ಕಂಬಳ ವಿಶೇಷ ಏನು?
ಶಿರಸಿ ತಾಲೂಕಿನ ಕಲ್ಮನೆ, ಹೆಗಡೆಕಟ್ಟಾ, ಹೆಗ್ಗಾರ ಭಾಗದಲ್ಲಿ ಪ್ರತಿ ವರ್ಷ ಬರಿಗೈ ನಿಂದ ಹೊಸೆದು ಮಾಡುವ ಚಕ್ಕುಲಿ ಸಿದ್ದಪಡಿಸಲಾಗುತ್ತದೆ. ಶನಿವಾರದಿಂದ ಚಕ್ಕುಲಿ ಕಂಬಳಕ್ಕೆ ಚಾಲನೆ ನೀಡಲಾಗಿದೆ. ವಾರವಿಡಿ ದಿನದಲ್ಲಿ ಒಂದು ಬಾರಿಯಂತೆ ಒಂದಲ್ಲಾ ಒಂದು ಮನೆಯಲ್ಲಿ ಈ ಕೈ ಚಕ್ಕಲಿ ಕಂಬಳ ಮಾಡಲಾಗುತ್ತದೆ. ಇದಾಕ್ಕಾಗಿ ನಿಗದಿ ಮಾಡಿದ ಮನೆಗೆ ಗ್ರಾಮದ ಜನರು ಹೋಗಿ ಬರಿಗೈನಲ್ಲಿ ಚಕ್ಕುಲಿ ಹೊಸೆದು ಮಾಡಲಾಗುತ್ತದೆ.ಮಹಿಳೆಯರು, ಪುರುಷರೆನ್ನದೇ ಎಲ್ಲರೂ ಒಗ್ಗಟ್ಟಾಗಿ ಸೇರಿ ಚಕ್ಕುಲಿ ತೆಯಾರಿಸುತ್ತಾರೆ. ಈ ಸಂದರ್ಭದಲ್ಲಿ ಒಟ್ಟಿಗೆ ಸೇರಿ ಹಾಡುಗಳು, ಕೃಷಿ ಹಾಗೂ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಾರೆ. ಈ ಮೂಲಕ ಒಬ್ಬರಿಗೊಬ್ಬರು ತಮ್ಮಲ್ಲಿರುವ ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಗಮ-ಗಮ ಚಕ್ಕುಲಿ ಸಿದ್ಧವಾದ ನಂತರ ಎಲ್ಲರೂ ಸವಿದು ಚಹ, ಕಾಫಿಗಳನ್ನು ಕುಡಿದು ವೀಳ್ಯದೆಲೆ ಅಡಿಕೆ ಅಗೆದು ನಾಲಿಗೆ, ತುಟಿ ಕೆಂಪಾಗಿಸಿ ತಮ್ಮ ತಮ್ಮ ಮನೆಗಳಿಗೆ ತೆರಳುತ್ತಾರೆ. ಈ ಮೂಲಕ ಊರಿನಲ್ಲಿ ತಮ್ಮ ತಮ್ಮ ಬಾಂದವ್ಯವನ್ನು ಪ್ರತಿ ವರ್ಷ ಗಣೇಶ ಚತುರ್ಥಿಗೂ ಮೊದಲು ವೃದ್ಧಿಸಿಕೊಳ್ಳುವ ಈ ಗ್ರಾಮದವರು ತಲೆ ತಲಾಂತರದಿಂದ ಈ ಕಂಬಳವನ್ನು ಜೀವಂತವಾಗಿಸಿಕೊಂಡು ಬಂದಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಂದು ಪ್ರಕರಣ – ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ, ಅತ್ಯಾಚಾರ ಯತ್ನಕೈ ಚಕ್ಕುಲಿ ಮಹತ್ವ ಏನು?
ಚಕ್ಕುಲಿಯನ್ನು ಬರಿಗೈ ನಿಂದ ಹೊಸೆದು ಸುತ್ತಿ ತೆಯಾರಿಸುವ ಚಕ್ಕುಲಿಯೇ ಕೈಚಕ್ಕುಲಿ. ಆದರೆ ಇಂದಿನ ದಿನಗಳಲ್ಲಿ ಹಿಟ್ಟನ್ನು ಚಕ್ಕುಲಿ ಹುಟ್ಟಿನಲ್ಲಿ ಹಾಕಿ ಒತ್ತಿ ಚಕ್ಕುಲಿ ಮಾಡುತ್ತಾರೆ. ಈ ಚಕ್ಕುಲಿ ಕೈನಿಂದ ಹೊಸೆದು ಮಾಡುತ್ತಾರೆ. ಹೀಗಾಗಿ ಬಾಳಿಕೆ ರುಚಿಯಲ್ಲಿ ಇದಕ್ಕೆ ವಿಶೇಷ ಮಹತ್ವವಿದೆ.ಗಣೇಶ ಚತುರ್ಥಿ ಮುಗಿಯುವವರೆಗೂ ಈ ಚಕ್ಕುಲಿ ಕಂಬಳ ಈ ಭಾಗದಲ್ಲಿ ನಡೆಯುವುದು ವಿಶೇಷವಾಗಿದೆ. ಕೆಜಿಗಟ್ಟಲೇ ಗ್ರಾಮದವರೆಲ್ಲಾ ಸೇರಿ ಮಾಡುವ ಚಕ್ಕುಲಿಯನ್ನು ನೆಂಟರಿಷ್ಟರು ಹಾಗೂ ಪರಿಚಿತ ಸೇಹಿತರಿಗೂ ನೀಡಿ ಸಹಬಾಳ್ಳೆಯ ಮಹತ್ವವನ್ನು ಈ ಗ್ರಾಮದ ಜನ ಕೈ ಚಕ್ಕುಲಿ ಕಂಬಳದ ಮೂಲಕ ಸಾರುವ ಮೂಲಕ ಮಾದರಿ ಯಾಗಿದ್ದಾರೆ.Sign in to your account
Username or Email Address


Password

 Remember Me


