ವಿಜಯಪುರ: ಡಾ.ಸುಧಾಮೂರ್ತಿ ಮತ್ತು ಡಾ.ನಾರಾಯಣಮೂರ್ತಿರನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು ಎಂದು ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ಹೇಳಿದರು.ಪದ್ಮಶ್ರೀ ಕಾಕಾ ಕಾರ್ ಖಾನಿಸ್ ಪ್ರೌಢಶಾಲೆ ನಿರ್ಮಾಣ ಕಾಮಗಾರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಶಂಕುಸ್ಥಾಪನೆ ಮಾಡಿದ್ದಾರೆ. ಅದಕ್ಕೂ ಮೊದಲು ಮಾಧ್ಯಮಗಳೊಂದಿದಗೆ ಮಾತನಾಡಿದ ಅವರು, ಈ ಶಾಲೆ ನಿರ್ಮಿಸುವ ಕಾರ್ಯ 6 ತಿಂಗಳಲ್ಲಿ ಮುಗಿಸಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲ ಚಟುವಟಿಕೆಗಳು ಪ್ರಾರಂಭ ಆಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.ಡಾ.ಸುಧಾಮೂರ್ತಿ ಮತ್ತು ಡಾ.ನಾರಾಯಣಮೂರ್ತಿ ಅವರನ್ನು ಈ ಪ್ರೌಢಶಾಲೆ ಕಟ್ಟಡ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಕರೆತರುವ ಆಶಯ ತಮ್ಮದಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:ಸೆ.5ರಂದು ‘ಗೌರಿ ಲಂಕೇಶ್ ದಿನ’ವನ್ನಾಗಿ ಆಚರಿಸಲಿದೆ ಕೆನಡಾದ ಬರ್ನಾಬಿ ನಗರ2020-21ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯ ಅಡಿಯಲ್ಲಿ 10 ಕೋಟಿ ರೂ. ಅನುದಾನ ಮಾಡಲಾಗಿತ್ತು. ಅದರಲ್ಲಿ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯ, ವಾಚನಾಲಯ, ದೈಹಿಕ ಶಿಕ್ಷಣ ವಿಭಾಗದ ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಕಾಲಾವಧಿಯಲ್ಲಿ ಪೂರ್ಣ ಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ:ಮದುವೆ ಮನೆಗೆ ಹೋಗಿ ಪ್ರಾಣಕ್ಕೆ ಆಪತ್ತು ತಂದುಕೊಂಡ 100ಕ್ಕೂ ಹೆಚ್ಚು ಜನರು1933 ರಲ್ಲಿ ಗಾಂಧೀಜಿಯವರಿಂದ ಪ್ರೇರಣೆ ಪಡೆದು ಕಾಕಾ ಕಾರಖಾನೀಸ ಅವರು ಹರಿಜನ ಕನ್ಯಾ ಮಂದಿರ ಮತ್ತು ಹರಿಜನ ಗಂಡು ಮಕ್ಕಳ ಹಾಸ್ಟೆಲ್ ಪ್ರಾರಂಭ ಮಾಡಿ 236 ಮಕ್ಕಳನ್ನು ಓದಿಸಿ ಕರ್ನಾಟಕದ ಗಾಂಧಿ ಅನಿಸಿಕೊಂಡರು. ದೀನ ದಲಿತರ ಉದ್ಧಾರಕ್ಕಾಗಿ ಅವರ ಜೀವನವನ್ನೇ ಮುಡುಪಾಗಿಟ್ಟವರು ಎಂದು ನೆನೆಪಿಸಿಕೊಂಡರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಬಸನಗೌಡ ಪಾಟೀಲ ವಹಿಸಿದ್ದರು. ಈ ಕಟ್ಟಡವು 2020-21 ನೇ ಸಾಲಿನ 5054-ಎಸ್.ಸಿ.ಪಿ ಅಡಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ 10 ಕೋಟಿ ರೂ.ಗಳಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಇದನ್ನೂ ಓದಿ:ಹುಬ್ಬಳ್ಳಿಗೆ ಅಮಿತ್ ಶಾರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂಕಟ್ಟಡದ ನೆಲಮಹಡಿ(1140,00 ಚಿ.ಮೀ), ಮೊದಲ ಮಹಡಿ (1180,00 ಚಿ.ಮೀ), ಎರಡನೇ ಮಹಡಿ (980,00 ಚ.ಮೀ) ಹಾಗೂ ಟೆರೆಸ್ ಮಹಡಿ (50.00 ಚ.ಮೀ) ಒಟ್ಟು 3350.00 ಚ.ಮೀ ವಿಸ್ತೀರ್ಣವನ್ನು ಹೊಂದಿದ್ದು, ಶಾಲೆಗೆ ಅವಶ್ಯವಿರುವ ಅನುಕೂಲತೆಗಳನ್ನು ಕಲ್ಪಿಸಲಾಗಿದೆ. ನೆಲ ಮಹಡಿಯು ಅಡ್ಮಿನಿಸ್ಟ್ರೇಟಿವ್ ಆಫೀಸ್, ರಿಸರ್ಚ್ ಸೆಂಟರ್, ಪ್ರಿನ್ಸಿಪಲ್ ಚೇಂಬರ್, ಕ್ಲಾಸ್ ರೂಮ್ಸ್-4, ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ, ಯೋಗಾ ಸೆಂಟರ್, ಲೇಡಿಸ್ ವೇಟಿಂಗ್ ರೂಮ್ ಗಳನ್ನು ಒಳಗೊಂಡಿರುತ್ತದೆ.ಮೊದಲನೇ ಮಹಡಿಯ ಕಾನ್ಫರನ್ಸ್ ರೂಮ್, ಲೈಬ್ರರಿ, ಮ್ಯಾನೇಜಮೆಂಟ್ ರೂಮ್, ಸ್ಟಾಫ್ ರೂಮ್, ಕ್ಲಾಸ್ ರೂಮ್ಸ್-4, ಹೆಲ್ತ್ ಸೆಂಟರ್, ಸ್ಟೋರ್ ಮತ್ತು ರೆಕಾಡ್ರ್ಸ್, ಇಂಡೋರ್ ಸ್ಪೋಟ್ರ್ಸ ಫೆಸಿಲಿಟ, ಜೆಂಟ್ಸ್ ವೇಟಿಂಗ್ ರೂಮ್ ಗಳನ್ನು ಒಳಗೊಂಡಿರುತ್ತದೆ. ಎರಡನೇ ಮಹಡಿಯ ರೆಸೋನನ್ಸ್ ಸೆಂಟರ್, ಡಿಜಿಟಲ್ ಲೈಬ್ರರಿ, ಮ್ಯಾನೇಜಮೆಂಟ್ ರೂಮ್, ಕ್ಲಾಸ್ ರೂಮ್ಸ್-4, ಮಲ್ಟಿ ಪರಪಸ್ ಹಾಲ್ ಗಳನ್ನು ಒಳಗೊಂಡಿದ್ದು, ಮೂರನೇ ಮಹಡಿಯು ಸ್ಟೇರಕೇಸ್ ಹೆಡ್ ರೂಮ್ಸ್ ಗಳಿರುತ್ತದೆ. ಇದನ್ನೂ ಓದಿ:ಬೆಳಗಾವಿ ಮೂವರು ನಾಯಕರನ್ನ ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಶ್ರೀ ರಮೇಶ್ ಜಿಗಜಿಣಗಿ, ಜಿಲ್ಲಾಧಿಕಾರಿ ಪಿ, ಸುನೀಲ್ ಕುಮಾರ್, ಪೆÇಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್, ಮುಖಂಡರುಗಳಾದ ಗೋಪಾಲನಾಯಕ್, ಅಡಿವೆಪ್ಪ ಸಾಲಗಲ್, ಸಿದ್ದು ರಾಯಣ್ಣವರ, ರಮೇಶ್ ಆಸಂಗಿ, ಶಂಕರ್, ಭೀರಪ್ಪ ಅರ್ಧಾವೂರ, ಹಾಗೂ ಇತರೆ ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
Sign in to your account
Username or Email Address


Password

 Remember Me


