ವಿಜಯಪುರ: ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಾ ಕುಳಿತಿದ್ದ ಮಹಿಳೆ ಮಾಂಗಲ್ಯ ಸರ ಕಳ್ಳತನ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮಹಿಳೆ ಪಕ್ಕದಲ್ಲಿಯೇ ಹೊಂಚು ಹಾಕಿ ನಿಂತು ಮಾಂಗಲ್ಯಸರ ಕಿತ್ತುಕೊಂಡು ಖದೀಮ ಓಡಿ ಹೋಗಿದ್ದಾನೆ.ಕದೀಮನ ಕೃತ್ಯ ಬಸ್ ನಿಲ್ದಾಣದಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಅಲ್ಲದೇ ಈ ಘಟನೆ ಸಪ್ಟೆಂಬರ್ 1 ರಂದು ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಇದನ್ನೂ ಓದಿ: ರಸ್ತೆ ಅಪಘಾತ, ದೇವನಕಟ್ಟಿಯ ಯೋಧ ಮುಂಬೈನಲ್ಲಿ ಸಾವು- ಸ್ವಗ್ರಾಮದಲ್ಲಿ ಅಂತಿಮ ನಮನ38 ಗ್ರಾಂ ಚಿನ್ನದ ಮಾಂಗಲ್ಯ ಸರ ಕಳೆದುಕೊಂಡವರು ರೇಣುಕಾ ಪಾಟೀಲ್ ಆಗಿದ್ದು, ಇವರು ತಾಳಿಕೋಟೆಯಿಂದ ಯಾದಗಿರಿಯ ದೋರಹಳ್ಳಿಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸದ್ಯ ಈ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ತಲೆ ಎತ್ತಿರುವ ಅಕ್ರಮ ಕ್ಯಾಸಿನೋ ಅಡ್ಡೆಗಳನ್ನು ಕೂಡಲೇ ನಿಲ್ಲಿಸಿ – ಕೆಜೆ ಜಾರ್ಜ್ ಪತ್ರ






 Advertisement 




Sign in to your account
Username or Email Address


Password

 Remember Me


