ಬೆಳಗಾವಿ: ನಾವು ಗೆದ್ದೇ ಗೆಲ್ತೇವೆ ಮತ್ತೇ ಮೆಜಾರಿಟಿ ತಂದೇ ತರ್ತೇವೆ ಅಂತಾ ಬೆಳಗಾವಿ ಉತ್ತರ ಮಾಜಿ ಶಾಸಕ ಫಿರೋಜ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡಿ: ಪ್ರತಾಪ್ ಸಿಂಹಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲುತ್ತೇವೆ ಮತ್ತು ಮೆಜಾರಿಟಿ ಪಡೆದು ಪಾಲಿಕೆ ಚುಕ್ಕಾಣಿ ಹಿಯುತ್ತೇವೆ ಎಂದು ಫಿರೋಜ್ ಸೇಠ್ ಹೇಳಿದ್ದಾರೆ. ನಾವು ಜನರಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವರಿಕೆ ಮಾಡುತ್ತೇವೆ. ಈ ಹಿಂದೆ ನಮ್ಮ 10 ವರ್ಷಗಳ ಅಧಿಕಾರಾವಧಿಯಲ್ಲಿ ಮಾಡಿದಂತೆ ಈ ಬಾರಿಯೂ ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದಿದ್ದಾರೆ.ಎಂಐಎಂ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ಇದು ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ನಡೆದಿದೆ. ಮತ್ತು ಅಲ್ಲಿ ಏನಾಯಿತು ಎಂಬುದು ನಿಮ್ಮೆಲ್ಲರಿಗೂ ಗೊತ್ತು. ಅಷ್ಟೇ ಇಲ್ಲಿಯೂ ಆಗುತ್ತೆ. ಕರ್ನಾಟಕ ಜನತೆ ಬುದ್ಧಿವಂತರಾಗಿದ್ದು, ಯೋಚನೆ ಮಾಡಿ ಮತ ಹಾಕುತ್ತಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ:ಬೇಗ ಪಯಣ ಮುಗಿಸಿದೆ – ಸಿದ್ಧಾರ್ಥ್ ನಿಧನಕ್ಕೆ ಸಲ್ಮಾನ್ ಕಂಬನಿಸೇಠ್ ಕೇವಲ ಹಿಂದೂ ಮುಸ್ಲಿಂ ಎಂದು ಚುನಾವಣೆ ಮಾಡದೇ ಭಾರತೀಯರು ಎನ್ನುವ ಅಜಂಡಾ ಮೇಲೆ ಚುನಾವಣೆ ಮಾಡಲು ನಿರ್ಧರಿಸಿದ್ದು, ಜನ ನಮ್ಮನ್ನು ಆಶೀರ್ವದಿಸುತ್ತಾರೆ ಎಂದು ಹೇಳಿದ್ದಾರೆ. ಆದರೆ ಜನರ ಚಿತ್ತ ಯಾರತ್ತ? ಎನ್ನುವುದನ್ನು ಮಾತ್ರ ಕಾದು ನೋಡಬೇಕಿದೆ.






 Advertisement 




Sign in to your account
Username or Email Address


Password

 Remember Me


