ಉಡುಪಿ: ಈ ವಾರಾಂತ್ಯದಿಂದ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ನಿರ್ಧಾರ ಪುನರ್ ಪರಿಶೀಲನೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರಿಗೆ ಕೋಟ ಶ್ರೀನಿವಾಸ್ ಪೂಜಾರಿ ವಿನಂತಿಸಿದ್ದಾರೆ.ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕುಂದಾಪುರದಲ್ಲಿ ಮಾಧ್ಯಮಗಳು ಮಾತನಾಡಿದರು. ಕೊರೊನಾ ಪಾಸಿಟಿವ್ ರೇಟ್ ಗಮನಿಸಿ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಉನ್ನತ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳುತ್ತೇವೆ ಜನಸಾಮಾನ್ಯರಿಗೆ ಇದರಿಂದ ಸಮಸ್ಯೆಯಾಗುತ್ತದೆ ಎನ್ನುವುದು ಸತ್ಯ ಎಂದರು. ಇದನ್ನೂ ಓದಿ: ಘೋಲ್ ಮೀನು ಹಿಡಿದು ಒಂದೇ ದಿನದಲ್ಲಿ ಕೋಟ್ಯಧಿಪತಿಯಾದ ಮೀನುಗಾರಪಾಸಿಟಿವಿಟಿ ರೇಟ್ ಕಡಿಮೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಆರೋಗ್ಯ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಚರ್ಚಿಸುತ್ತೇನೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಕಡ್ಡಾಯವಾಗಿ ಅನುಸರಿಸಬೇಕು. ಶಾಲೆಗಳು ಪ್ರಾರಂಭವಾಗುತ್ತಿದ್ದು ಮಕ್ಕಳು ಪೋಷಕರಲ್ಲಿ ಕೊರೊನಾ ಜಾಗೃತಿ ಮೂಡಿಸಬೇಕು. ಶಾಲೆಗಳಲ್ಲೂ ಕೂಡ ಅಂತರವನ್ನು ಕಾಪಾಡಿಕೊಂಡು ಸಾಂಕ್ರಾಮಿಕ ರೋಗವನ್ನು ಹಬ್ಬಲು ಬಿಡಬಾರದು ಎಂದು ಸಚಿವ ಕೋಟ ಹೇಳಿದರು. ಇದನ್ನೂ ಓದಿ: ನಾನು ಜನರ ಬಳಿಗೆ ಹೋಗಿ ಕೆಲಸ ಮಾಡುವೆ-ಶಾಲೆ ಭೇಟಿ ಮೂಲಕ ಉಡುಪಿ ಡಿಸಿ ಅಧಿಕಾರ ಸ್ವೀಕಾರSign in to your account
Username or Email Address


Password

 Remember Me


