ಚಿಕ್ಕಮಗಳೂರು: 85 ಗಂಟೆಯಲ್ಲಿ ಮೈಸೂರಿನ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ ನನ್ನ ಕೃತಜ್ಞತೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಶಂಸಿದ್ದಾರೆ.ಜಿಲ್ಲೆಯ ಕಡೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ 5ನೇ ತಂಡ ತರಬೇತಿ ಪಡೆದು ನಿರ್ಗಮಿತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮಗಳ ಜೊತೆ ಮೈಸೂರಿನ ಗ್ಯಾಂಗ್ ರೇಪ್ ವಿಚಾರವಾಗಿ ಮಾತನಾಡಿದ್ದು, ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಯಾವ ಸಾಕ್ಷಿಗಳು ಇಲ್ಲ. ತೊಂದರೆಗೊಳಗಾದವರು ಹೇಳಿಕೆ ನೀಡಿಲ್ಲ. ಆದರೂ ನಮ್ಮ ಪೊಲೀಸರು ಪ್ರಕರಣವನ್ನು ಹೇಗೆ ಭೇದಿಸುತ್ತಾರೆ ಎಂದು ಅನ್ನಿಸಿತ್ತು. ಮಂತ್ರಿಯಾಗಿ ನಾನೇ ಕುತೂಹಲದಿಂದ ವೀಕ್ಷಿಸುತ್ತಿದ್ದೆ. ನಮ್ಮ ಪೊಲೀಸರು 85 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಆಗ ನನ್ನ ಹೃದಯ ತುಂಬಿ ಬಂತು ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.ನಮ್ಮ ಪೊಲೀಸರ ಇಮೇಜ್ ಜಾಸ್ತಿಯಾಯ್ತು. ನಮ್ಮ ಪೊಲೀಸ್ ವ್ಯವಸ್ಥೆ ಅತ್ಯಂತ ಬಿಗಿಯಾಗಿದೆ. ವೈಜ್ಞಾನಿಕವಾಗಿ ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚುವ ಎಲ್ಲಾ ಕಲೆ ನಮ್ಮ ಪೊಲಿಸರಿಗೆ ಕರಗತವಾಗಿದೆ. ನಮ್ಮ ಸೇನಾ ಪಡೆ ಜಗತ್ತಿನ ಅತ್ಯಂತ ಮೂರನೇ ದೊಡ್ಡ ಪಡೆ. ಜಗತ್ತಿನಲ್ಲಿ ನಮ್ಮ ಪೊಲೀಸ್ ಪಡೆಗೆ ಒಳ್ಳೆಯ ಹೆಸರಿದೆ. ಅದರಲ್ಲೂ ನಮ್ಮ ಕರ್ನಾಟಕದ ಪೊಲೀಸರಿಗೆ ಇದೆ ಎಂದು ತರಬೇತಿ ಪಡೆದ ನೂತನ ನಿರ್ಗಮಿತ ಪೊಲೀಸರಿಗೆ ಹುರಿದುಂಬಿಸಿದ್ದಾರೆ.ಇದನ್ನೂ ಓದಿ:KSRTC ಬಸ್ ತಡೆದು ವಿದ್ಯಾರ್ಥಿಗಳು, ಜನರಿಂದ ಪ್ರತಿಭಟನೆಮೈಸೂರು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಅವರಿಗೆ ಶಿಕ್ಷೆ ಆಗುವಂತೆ ನಮ್ಮ ಪೊಲೀಸರು ವಿಶೇಷ ಶ್ರಮ ವಹಿಸಿದ್ದಾರೆ. ಸರ್ಕಾರ ಕೂಡ ಅದರ ಬಗ್ಗೆ ವಿಶೇಷವಾದ ಆದ್ಯತೆ ನೀಡಿದೆ. ಮೈಸೂರಿನ ಎರಡೂ ಪ್ರಕರಣಗಳನ್ನು ಕಡಿಮೆ ಸಮಯದಲ್ಲಿ ಭೇದಿಸಿದ ಎಲ್ಲಾ ಪೊಲೀಸ್ ತಂಡಕ್ಕೆ ನನ್ನ ಕೃತಜ್ಞತೆ ಎಂದು ಪ್ರಶಂಸಿದ್ದಾರೆ.ಯಾರು ಅಪರಾಧ ಮಾಡುತ್ತಾರೋ ಅವರಿಗೆ ದೊಡ್ಡ ಸಂದೇಶ ಹೋಗಿದೆ. ಏನಾದರೂ ಮಾಡಿ ಹೇಗಾದರೂ ಬಚಾವ್ ಆಗಬಹುದು ಅನ್ನೋದು ಆಗಲ್ಲ. ಪೊಲೀಸರು ಅದರ ಹಿಂದೆ ಬೀಳುತ್ತಾರೆ. ಅದನ್ನು ಯಶಸ್ವಿಯಾಗಿ ಭೇದಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ..ಇದನ್ನೂ ಓದಿ:ಚುನಾವಣೆ ಪ್ರಚಾರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಕಟೀಲ್ಸಂತ್ರಸ್ತೆ ಈಗ ಹೇಳಿಕೆ ಕೊಡುವ ಸ್ಥಿತಿಯಲ್ಲಿ ಇಲ್ಲ. ಇಂತಹಾ ಸಮಯದಲ್ಲಿ ಹೆಚ್ಚು ಒತ್ತಡ ಹಾಕುವುದು ಸರಿಯಲ್ಲ. ನಮ್ಮ ಮಹಿಳಾ ಪೊಲೀಸ್ ಅಧಿಕಾರಿಗಳು ವಿಶೇಷ ಪ್ರಯತ್ನ ಮಾಡಿದರು. ಸ್ವಲ್ಪ ಸಮಯದ ನಂತರ ಹೇಳಬಹುದು. ಮಣಿಪಾಲ್ ಘಟನೆಯಲ್ಲಿ ಹೇಳಿಕೆ ಕೊಡುವುದಿಲ್ಲ ಎಂದವರು ಮೂರು ತಿಂಗಳ ಬಳಿಕ ಹೇಳಿಕೆ ನೀಡಿದ್ದರು. ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ.ಈ ಕಾರ್ಯಕ್ರಮದಲ್ಲಿ ಜ್ಞಾನೇಂದ್ರ ಅವರು ಭಾಷಣ ಮಾಡುವ ವೇಳೆ ವೇದಿಕೆ ಮುಂಭಾಗ ಎಡ ಹಾಗೂ ಬಲಭಾಗದಲ್ಲಿ ನಿಂತಿದ್ದ ಪೊಲೀಸರಲ್ಲಿ ಮೈಸೂರಿನ ಅಶ್ವದಳದ ಮೈಲುದ್ದೀನ್ ಎಂಬ ಸಿಬ್ಬಂದಿ ಬಿಸಿಲಿಗೆ ತಲೆಸುತ್ತು ಬಂದು ಬಿದ್ದರು. ಕೂಡಲೇ ಚಿಕ್ಕಮಗಳೂರು ಎಸ್ಪಿ ಅಕ್ಷಯ್ ವೇದಿಕೆ ಮೇಲಿಂದ ಎದ್ದು ಬಂದು ಸಿಬ್ಬಂದಿಯನ್ನು ಎತ್ತಿ ನೀರು ಕುಡಿಸಿ ಆಂಬುಲೆನ್ಸ್ ಗೆ ಕಾಲ್ ಮಾಡಿದ್ದಾರೆ. ಸ್ವತಃ ಎಸ್ಪಿಯೇ ಆ ಸಿಬ್ಬಂದಿಯನ್ನು ಎತ್ತಿಕೊಂಡು ಹೋಗಿ ಆಂಬುಲೆನ್ಸ್ ನಲ್ಲಿ ಕೂರಿಸಿದರು. ಅಲ್ಲಿವರೆಗೆ ಜ್ಞಾನೇಂದ್ರ ಅವರು ಕೂಡ ಮಾತು ನಿಲ್ಲಿಸಿದ್ದರು..ಇದನ್ನೂ ಓದಿ:ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ನೀಡಿದ ಎನ್.ಆರ್.ರಮೇಶ್Sign in to your account
Username or Email Address


Password

 Remember Me


