ಬೆಂಗಳೂರು: ಈ ಬಾರಿಯ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷದಿಂದ ಕೈಗೊಂಡಿರುವ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ದೇಶದ್ಯಾಂತ ಗಮನ ಸೆಳೆದಿದ್ದು, ಕೇಂದ್ರದಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಈ ಮೊಬೈಲ್ ಬೆಳೆ ಸಮೀಕ್ಷೆ ಈ ಬಾರಿಯೂ ಕೂಡ ಯಶಸ್ವಿಯಾಗಬೇಕೆಂದು ಕೇಳಿಕೊಂಡಿದ್ದಾರೆ.ಇದನ್ನೂ ಓದಿ:ಚುನಾವಣೆ ಪ್ರಚಾರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಕಟೀಲ್ಕಳೆದ ವರ್ಷ ರಾಜ್ಯಾದ್ಯಂತ ಬೆಳೆ ಸಮೀಕ್ಷೆ ಕ್ಷಿಪ್ರ ಗತಿಯಲ್ಲಿ ಇತರೆ ಇಲಾಖೆಗಳ ಸಹಯೋಗದಲ್ಲಿ ಕೈಗೊಂಡು ಯಶಸ್ವಿಯೂ ಆಗಿದೆ. ಇತರೆ ರಾಜ್ಯಗಳಿಗೆ ಕರ್ನಾಟಕ ಕೃಷಿ ಇಲಾಖೆಯ ಈ ಸಾಧನೆ ಮಾದರಿಯೂ ಆಗಿದೆ. ಕೇಂದ್ರದಿಂದ ಅಗ್ರಿ ಟ್ರೆಂಡ್ ಸೆಟ್ಟರ್ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಇಂತಹ ಸಾಧನೆ ಇನ್ನು ಮುಂದೆಯೂ ಆಗಬೇಕು. ರೈತ ತಾನೇ ತನ್ನ ಬೆಳೆಗೆ ಪ್ರಮಾಣ ಪತ್ರ ನೀಡುವಂತಹ ಜಮೀನಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅರ್ಹನೆಂದು ಹೇಳಿಕೊಳ್ಳುವಂತಹ ಮೊಬೈಲ್ ಬೆಳೆ ಸಮೀಕ್ಷೆ ನಿರಂತರ ನಡೆಯಬೇಕು. ಕಳೆದ ಬಾರಿಯಂತೆ ಎಲ್ಲಾ ಕೃಷಿ ಅಧಿಕಾರಿಗಳು ಈ ಪ್ರಕ್ರಿಯೆ ಯಶಸ್ಸಿಗೆ ಮತ್ತೆ ಚುರುಕಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.2021-22ನೇ ಸಾಲಿನಲ್ಲಿ ಪೂರ್ವ ಮುಂಗಾರಿನಲ್ಲಿ 2.94 ಲಕ್ಷ ತಾಕುಗಳನ್ನು ರೈತರೇ ಸ್ವತಃ ರೈತರ ಆ್ಯಪ್‍ನಲ್ಲಿ ಹಾಗೂ 44.77 ಲಕ್ಷ ತಾಕುಗಳನ್ನು ಖಾಸಗಿ ನಿವಾಸಿಗಳ ಆ್ಯಪ್‍ನಲ್ಲಿ ಬೆಳೆ ಮಾಹಿತಿಯನ್ನು ದಾಖಲು ಮಾಡಲಾಗಿರುತ್ತದೆ. 2021-22ನೇ ಸಾಲಿನಲ್ಲಿ ಮುಂಗಾರಿನಲ್ಲಿ 6.18 ಲಕ್ಷ ತಾಕುಗಳನ್ನು ರೈತರೇ ಸ್ವತಃ ರೈತರ ಆ್ಯಪ್‍ನಲ್ಲಿ ಹಾಗೂ 0.66 ಲಕ್ಷ ತಾಕುಗಳನ್ನು ಖಾಸಗಿ ನಿವಾಸಿಗಳ ಆ್ಯಪ್‍ನಲ್ಲಿ ಆಗಸ್ಟ್.30 ರವರೆಗೆ ಅಪೆÇ್ಲೀಡ್ ಮಾಡಲಾಗಿದ್ದು, ಬೆಳೆ ಸಮೀಕ್ಷೆಯು ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ಕೇರಳದ 32 ಮಂದಿಗೆ ಸೋಂಕು, ಕೋಲಾರದ ನರ್ಸಿಂಗ್ ಕಾಲೇಜು ವಿರುದ್ಧ ಕಠಿಣ ಕ್ರಮ: ಸುಧಾಕರ್ಪ್ರತಿ ವರ್ಷದಂತೆ ಈ ವರ್ಷವೂ ಸಹ ಮುಂಗಾರು ಹಂಗಾಮಿನಲ್ಲಿ ಸುಮಾರು 2.09 ಕೋಟಿ ತಾಕುಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಿದ್ದು, ರೈತರಿಂದಲೇ ಅವರ ಜಮೀನಿನ ಬೆಳೆ ಮಾಹಿತಿಯನ್ನು ಆ್ಯಪ್ ಮೂಲಕ ಅಪೆÇ್ಲೀಡ್ ಮಾಡಿಸುವ ಉದ್ದೇಶವನ್ನು ಹೊಂದಿದ್ದೇವೆ. ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರೇ ಸ್ವತಃ ಬೆಳೆ ಸಮೀಕ್ಷೆ ಮಾಹಿತಿಯನ್ನು ದಾಖಲಿಸಬೇಕೆಂದು ರೈತರಲ್ಲಿ ಮನವಿ ಮಾಡಿದ್ದಾರೆ.ಇದನ್ನೂ ಓದಿ:ಚುನಾವಣೆ ಪ್ರಚಾರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಕಟೀಲ್ವಿಕಾಸಸೌಧದ ಕಚೇರಿಯಲ್ಲಿ ಕೃಷಿ ಇಲಾಖಾಧಿಕಾರಿಗಳೊಂದಿಗೆ 2021-22 ನೇ ಸಾಲಿನ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಪ್ರಗತಿ ಕುರಿತು ಬಿ.ಸಿ.ಪಾಟೀಲ್ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕೃಷಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜ್‍ಕುಮಾರ್ ಖತ್ರಿ, ಆಯುಕ್ತ ಬ್ರಿಜೆಶ್ ಕುಮಾರ್ ದೀಕ್ಷಿತ್, ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಮತ್ತಿತ್ತರರು ಪಾಲ್ಗೊಂಡಿದ್ದರು.






 Advertisement 




Sign in to your account
Username or Email Address


Password

 Remember Me


