ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ (Hemavati Express Canal) ಯೋಜನೆ ವಿರುದ್ಧ ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ನಿವಾಸದ ಎದುರು ಪ್ರತಿಭಟನೆ ನಡೆಸಲು ಮುಂದಾದ ಮಾಜಿ ಸಚಿವ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಜಿಲ್ಲೆಯ ಹೇಮಾವತಿ ನೀರನ್ನು ರಾಮನಗರಕ್ಕೆ ಕೊಂಡೊಯ್ಯುವ ನೀರಾವರಿ ಯೋಜನೆ ‘ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್’ ವಿರುದ್ಧ ಗೃಹ ಸಚಿವರ ನಿವಾಸದ ಮುಂದೆ ಪ್ರತಿಭಟನೆಗೆ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿರೋಧಿ ಸಮಿತಿ ಧರಣಿಗೆ ಮುಂದಾಗಿತ್ತು. ಇದನ್ನೂ ಓದಿ: ಮಂತ್ರಾಲಯ ಭಕ್ತರ ದೇಣಿಗೆ – ಗುರು ರಾಘವೇಂದ್ರ ಸ್ವಾಮಿ ಮಠದ ಶಿಲಾಮಂಟಪಕ್ಕೆ ಸುವರ್ಣ ಕವಚಗುರುವಾರ ಬೆಳಗ್ಗೆ 11 ಗಂಟೆಗೆ ತುಮಕೂರಿನ ಹೆಗ್ಗೆರೆಯಲ್ಲಿ ಇರುವ ಜಿ.ಪರಮೇಶ್ವರ್ ಮನೆ ಎದುರು ಪಕ್ಷಾತೀತವಾಗಿ ಹೋರಾಟ ನಡೆಸಲು ಸಮಿತಿ ಮುಂದಾಗಿತ್ತು. ಮಾಜಿ ಸಚಿವ ಸೊಗಡು ಶಿವಣ್ಣ, ಗ್ರಾಮಾಂತರ ಶಾಸಕ ಸುರೇಶ್ ಗೌಡ, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಮಸಾಲಾ ಜಯರಾಮ್ ಸೇರಿದಂತೆ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದವು.ಆದರೆ ಪ್ರತಿಭಟನೆಗೂ ಮುನ್ನವೇ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ಬಿಜೆಪಿ ಮುಖಂಡ ಪ್ರಭಾಕರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಮನೆ ಮುಂದೆ ಪ್ರತಿಭಟನೆಗೆ ತಯಾರಿ ನಡೆಸುತ್ತಿದ್ದಾಗ ಪೊಲೀಸರು ಇಬ್ಬರನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 88 ಕೋಟಿ ಅಕ್ರಮ – ಎಂಡಿ, ಲೆಕ್ಕಾಧಿಕಾರಿ ಅಮಾನತುಸೊಗಡು ಶಿವಣ್ಣರನ್ನ ವಶಕ್ಕೆ ಪಡೆದು ಪ್ರತಿಭಟನೆ ಹತ್ತಿಕ್ಕಲು ಮುಂದಾದ ಪೊಲೀಸರ ನಡೆ ಖಂಡಿಸಿ ಡಿಆರ್ ಕಚೇರಿ ಬಳಿ ಪ್ರತಿಭಟಿಸಲಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಖುದ್ದು ಸ್ಥಳಕ್ಕೆ ಬಂದ ತುಮಕೂರು ಎಸ್‌ಪಿ ಅಶೋಕ್ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದರು.ಎಕ್ಸ್‌ಪ್ರೆಸ್‌ ಕೆನಾಲ್ ತುಮಕೂರು ಜಿಲ್ಲೆಯ ಹೇಮಾವತಿ ನೀರನ್ನು ರಾಮನಗರಕ್ಕೆ ಕೊಂಡೊಯ್ಯವ ನೀರಾವರಿ ಯೋಜನೆಯಾಗಿದೆ. ರಾಮನಗರಕ್ಕೆ ನೀರು ಹರಿದರೆ ತುಮಕೂರು ಜಿಲ್ಲೆಯ ಜನತೆಗೆ ನೀರಿನ ಸಂಕಷ್ಟ ಎದುರಾಗಲಿದೆ ಎಂದು ಪ್ರತಿಭಟನೆ ನಡೆಸಲಾಗುತ್ತಿದೆ.Sign in to your account
Username or Email Address


Password

 Remember Me


