ಧಾರವಾಡ: ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಬಹಿಷ್ಕಾರ ಮಾಡುತ್ತೇವೆ ಎಂದು ಶ್ರೀ ರಾಮಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಗಂಗಾಧರ ಕುಲಕರ್ಣಿ ಹೇಳಿದರು.ಶ್ರೀ ರಾಮಸೇನೆ ನೇತೃತ್ವದಲ್ಲಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹಾಗೂ ಗ್ರಾಮೀಣ ಶಾಸಕ ಅಮೃತ ದೇಸಾಯಿ ಮನೆಗೆ ಹೋಗಿ ಈ ಬಗ್ಗೆ ಮನವಿ ಸಲ್ಲಿಸಿದ ನಂತರ ಧಾರವಾಡ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಿಜೆಪಿ ನೇತೃತ್ವದ ಸರ್ಕಾರ ಹಿಂದೂಗಳ ಆರಾಧ್ಯ ವಿಘ್ನ ವಿನಾಶಕ ಗಣಪತಿ ತಂಟೆಗೆ ಬಂದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತೆ ಎಂದು ಎಚ್ಚರಿಸಿದರು.ಇದನ್ನೂ ಓದಿ:ಕೊಡಲಿಯಿಂದ ತಲೆಗೆ ಹೊಡೆದು ಯುವಕನ ಕೊಲೆಇದೇ ವೇಳೆ ಗಣೇಶೋತ್ಸವ ಆಚರಣೆ ನಿಷೇಧ ಮಾಡಿದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಶ್ರೀ ರಾಮಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ:ಒಂದು ವರ್ಷದಿಂದ ಇವರು ಬಾಯಿ ಮುಚ್ಚಿದ್ರು: ಡಿಕೆಶಿ ವಿರುದ್ಧ ಅನಿಲ್ ಬೆನಕೆ ವಾಗ್ದಾಳಿ






 Advertisement 




Sign in to your account
Username or Email Address


Password

 Remember Me


