ಹಾವೇರಿ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ, ನೆರೆಯಿಂದಾಗಿ 1,292 ಕಿ.ಮೀ.ಯಷ್ಟು ರಸ್ತೆ ಹಾಳಾಗಿ, 197 ಕೋಟಿ ರೂ. ನಷ್ಟ ಉಂಟಾಗಿದೆ. ಗುಂಡಿ ಬಿದ್ದ ರಸ್ತೆಯಲ್ಲಿ ಜನ ಸಂಚಾರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಅತಿವೃಷ್ಟಿ ಹಾಗೂ ನೆರೆ ಹಾವಳಿಗೆ ಲೋಕೋಪಯೋಗಿ ಇಲಾಖೆಯ 246 ಕಿ.ಮೀ. ರಸ್ತೆ ಹಾನಿಯಾಗಿದ್ದು, ಇದರಲ್ಲಿ 63.82ಕಿ.ಮೀ. ರಾಜ್ಯ ಹೆದ್ದಾರಿ, 182.22ಕಿ.ಮೀ. ಜಿಲ್ಲಾ ಮುಖ್ಯ ರಸ್ತೆ ಹಾಳಾಗಿದೆ. ಇದರ ಹಾನಿಯ ಅಂದಾಜು ಮೌಲ್ಯ 183.55 ಕೋಟಿ ರೂ.ಗಳಷ್ಟಾಗಿದೆ. ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ 1046.8ಕಿಮೀ ಗ್ರಾಮೀಣ ರಸ್ತೆ ಹಾಳಾಗಿದ್ದು, ಹಾನಿಯ ಅಂದಾಜು ಮೌಲ್ಯ 13.84ಕೋಟಿ ರೂ. ಆಗಿದೆ. ಇದನ್ನೂ ಓದಿ: ನಾಳೆ ಗಡಿ ಭಾಗದ 8 ಜಿಲ್ಲೆಗಳಿಗೆ ಸಿಗುತ್ತಾ ರಿಲೀಫ್?-ಗಣೇಶೋತ್ಸವ ಮಾರ್ಗಸೂಚಿ ಸಡಿಲಕ್ಕೆ ಸರ್ಕಾರ ಪ್ಲಾನ್ಕಳೆದ ತಿಂಗಳು ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಜನಜೀವನವೇ ತತ್ತರಗೊಂಡಿತ್ತು. ಅನೇಕ ಗ್ರಾಮಗಳ ಮನೆಗಳಿಗೆ ನೀರು ನುಗ್ಗಿತ್ತು, ರಸ್ತೆಗಳೆಲ್ಲ ಕೊಚ್ಚಿ ಹಳ್ಳಗಳಾಗಿದ್ದವು. ನದಿ ತೀರದ ಪ್ರದೇಶಗಳ ರಸ್ತೆ ಮುಳುಗಿದ್ದವು. ಪ್ರವಾಹದಿಂದ ಆಗಿರುವ ರಸ್ತೆ ಹಾನಿಯಿಂದ ಗ್ರಾಮೀಣ ಭಾಗದಲ್ಲಿ ಸಂಚಾರವೇ ದುಸ್ತರವಾಗಿದೆ. ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳಲ್ಲಿ ವಾಹನ ಓಡಿಸುವುದೆಂದರೆ ದೊಡ್ಡ ಸವಾಲಾಗಿ ಪರಿಣಮಿಸಿದೆ.ಗ್ರಾಮೀಣ ಭಾಗದ ಜನರು ಜಿಲ್ಲಾಡಳಿತಕ್ಕೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಸದ್ಯ ನಮ್ಮ ಜಿಲ್ಲೆಯ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿದ್ದಾರೆ. ಹೆಚ್ಚು ಅನುದಾನ ನೀಡಿ ರಸ್ತೆಗಳ ಅಭಿವೃದ್ಧಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.Sign in to your account
Username or Email Address


Password

 Remember Me


