ಹಾವೇರಿ: ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯವನ್ನು 524 ಅಡಿಗೆ ಏರಿಕೆ ಮಾಡಲು ತಜ್ಞರ ತಂಡದ ಜತೆ ದೆಹಲಿಯಲ್ಲಿ ಚರ್ಚಿಸುತ್ತೇನೆ. ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಆದಷ್ಟು ಬೇಗ ನೋಟಿಫಿಕೇಷನ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಏರಿಕೆ ಸಂಬಂಧ ತಜ್ಞರ ವರದಿ ಬಂದಿದ್ದು, ಆರೋಗ್ಯ ಇಲಾಖೆಯ ವೈಫಲ್ಯ ಸಾಬೀತಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು, ಇದು ಹಾವೇರಿ ಜಿಲ್ಲೆಗೆ ಮಾತ್ರ ಸಂಬಂಧಿಸಿದ್ದಲ್ಲ. ಇಡೀ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಬಂದಾಗ ಹಲವಾರು ಸಮಸ್ಯೆಗಳು ಉಂಟಾಗಿವೆ. ತಜ್ಞರು ಕೆಲವು ಸಲಹೆ, ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆಯನ್ನು ಉನ್ನತೀಕರಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.ಆಗಸ್ಟ್ 21ರಂದು ಆಲಮಟ್ಟಿ ಡ್ಯಾಂಗೆ ಮುಖ್ಯಮಂತ್ರಿಗಳು ಭೇಟಿ ನೀಡಿ ಕೃಷ್ಣೆಗೆ ಬಾಗಿನ ಅರ್ಪಿಸಿದ್ದರು. ಸಿಎಂ ಆಗಮನ ಹಿನ್ನೆಲೆ ಆಲಮಟ್ಟಿ ಆಣೆಕಟ್ಟಿ ವಧುವಿನಂತೆ ಕಂಗೊಳಿಸುತ್ತಿತ್ತು. ಇದನ್ನೂ ಓದಿ: 1ರಿಂದ 8ನೇ ತರಗತಿ ಶಾಲೆಗಳ ಆರಂಭ – ಆ 30 ರಂದು ಸಿಎಂ ನೇತೃತ್ವದಲ್ಲಿ ಸಭೆSign in to your account
Username or Email Address


Password

 Remember Me


