ಕಾರವಾರ: ಕಾಡು ಪ್ರಾಣಿಗಳನ್ನು ಹಿಡಿಯಲು ಹಾಕಿದ್ದ ತಂತಿಯ ಉರುಳಿಗೆ ನಾಲ್ಕು ವರ್ಷದ ಅಪರೂಪದ ಕಪ್ಪು ಚಿರತೆ ಸಿಲುಕಿ ಮೃತಪಟ್ಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆಯಲ್ಲಿ ಇಂದು ನಡೆದಿದೆ.ಇಂದು ಬೆಳಗ್ಗೆ ಉರುಳಿಗೆ ಸಿಲುಕಿ ಚಿರತೆ ಒದ್ದಾಡುವುದನ್ನು ನೋಡಿದ ಸ್ಥಳೀಯರು, ಅರಣ್ಯಾಧಿಕಾರಿಗಳಿಗೆ ತಿಳಸಿದ್ದಾರೆ. ತಕ್ಷಣ ಬನವಾಸಿ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಲು ಸ್ಥಳಕ್ಕೆ ಆಗಮಿಸಿದ್ದರು. ಆದರೆ ರಕ್ಷಣೆ ಮಾಡುವಷ್ಟರಲ್ಲಿ ಚಿರತೆ ಸಾವನ್ನಪ್ಪಿದೆ. ಇದನ್ನೂ ಓದಿ:  ಮಹಿಳೆಯರ ವಿರುದ್ಧದ ಅಪರಾಧಗಳತ್ತ ಕಣ್ಣು ಮುಚ್ಚಬೇಡಿ, ಮಾತನಾಡಿ: ರಮ್ಯಾಮಲೆನಾಡು ಭಾಗದಲ್ಲಿ ಇದೇ ಮೊದಲ ಬಾರಿ ಕಪ್ಪು ಚಿರತೆ ಇರುವುದು ಪತ್ತೆಯಾಗಿದೆ. ಚಿರತೆ ಕಳೆಬರಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಾಡು ಪ್ರಾಣಿ ಭೇಟೆಗೆ ಯಾರು ಉರಳು ಹಾಕಿದ್ದಾರೆ ಎಂಬ ತನಿಖೆಯನ್ನು ಅರಣ್ಯಾಧಿಕಾರಿಗಳು ಕೈಗೊಂಡಿದ್ದಾರೆ.Sign in to your account
Username or Email Address


Password

 Remember Me


