ಚಿಕ್ಕಬಳ್ಳಾಪುರ: ಇಂದಿನಿಂದ ರಾಜ್ಯದಲ್ಲಿ 9, 10 ಸೇರಿದಂತೆ ಪಿಯು ಕಾಲೇಜುಗಳ ಆರಂಭ ಹಿನ್ನೆಲೆ, ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರೌಢ ಶಾಲೆ ಹಾಗೂ ವಾಪಸಂದ್ರ ಪ್ರೌಢ ಶಾಲೆಗಳಿಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಭೇಟಿ ನೀಡಿ, ಚಾಕಲೇಟ್, ಗುಲಾಬಿ ಹೂ ಕೊಟ್ಟು ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದರು.ಮೊದಲು ನಗರದ ಜೂನಿಯರ್ ಕಾಲೇಜಿನ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಚಾಕಲೇಟ್ ಹಾಗೂ ಗುಲಾಬಿ ಹೂ ಕೊಟ್ಟು ಸ್ವಾಗತಿಸಿದರು. ನಂತರ ವಾಪಸಂದ್ರ ಪ್ರೌಢ ಶಾಲೆಗೆ ಭೇಟಿ ನೀಡಿದ ಸಚಿವರು ಅಲ್ಲೂ ವಿದ್ಯಾರ್ಥಿಗಳಿಗೆ ಚಾಕಲೇಟ್, ಹೂ ಕೊಟ್ಟು ಶುಭ ಹಾರೈಸಿದರು. ಇದೇ ವೇಳೆ ವಿದ್ಯಾರ್ಥಿನಿಯರು ಸಚಿವರಿಗೆ ರಾಖಿ ಕಟ್ಟಿ ರಕ್ಷಾ ಬಂಧನದ ಶುಭಾಶಯ ತಿಳಿಸಿದರು. ಇದನ್ನೂ ಓದಿ: ಜುಲೈ ನಂತರ ಕೊರೊನಾ ತವರೂರಿನಲ್ಲಿ ವರದಿಯಾಗಿಲ್ಲ ಪ್ರಕರಣಕಳೆದ ಒಂದೂವರೆ ವರ್ಷದಿಂದ ಆನ್ಲೈನ್ ಮೂಲಕ ಕಲಿಕೆ ಮುಂದುವರೆಸುತ್ತಿರುವ ಮಕ್ಕಳ ಮಾನಸಿಕ ಆರೋಗ್ಯ, ವ್ಯಕ್ತಿತ್ವ ವಿಕಸನ ಹಾಗು ಭವಿಷ್ಯವನ್ನು ಪರಿಗಣಿಸಿ, ತಜ್ಞರ ಸಲಹೆ ಪಡೆದು ಎಲ್ಲ ಮುಂಜಾಗ್ರತೆಗಳೊಂದಿಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಪೋಷಕರು ನಿರಾತಂಕವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಬೇಕೆಂದು ಕೋರುತ್ತೇನೆ.#ಮರಳಿಶಾಲೆಗೆ2/2 pic.twitter.com/F8BAbpha1r— Dr Sudhakar K (@mla_sudhakar) August 23, 2021ಈ ವೇಳೆ ಮಾತನಾಡಿದ ಅವರು, ಕೋವಿಡ್ ಬಂದ ನಂತರ ಕಳೆದ ಒಂದೂವರೆ ವರ್ಷದಿಂದ ಶಾಲೆಗಳ ಆರಂಭ ಆಗಿರಲಿಲ್ಲ. ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ ಸಂಭವಿಸಿದ್ದು. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಮಂಕಾಗಿತ್ತು. ವಿದ್ಯಾರ್ಥಿಗಳ ಆರೋಗ್ಯದ ಜೊತೆಗೆ ಶೈಕ್ಷಣಿಕ ಬದುಕು ರೂಪಿಸೋದು ಸರ್ಕಾರದ ಬಹುದೊಡ್ಡ ಹೊಣೆಗಾರಿಕೆ, ಜವಾಬ್ದಾರಿ, ಹೀಗಾಗಿ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಜೊತೆ ಶಾಲೆಗಳ ಆರಂಭ ಮಾಡಲಾಗಿದೆ ಎಂದರು. ಇದನ್ನೂ ಓದಿ: ವಿದ್ಯಾರ್ಥಿಗಳ ಕೈಯಲ್ಲಿ ದೀಪ ಬೆಳಗಿಸಿ ಸ್ವಾಗತ ಕೋರಿದ ಶಿಕ್ಷಕರುರಾಜ್ಯಾದ್ಯಂತ ಇಂದಿನಿಂದ 9 ಹಾಗೂ 10 ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಪುನರಾರಂಭವಾಗಿತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರದ ವಾಪಸಂದ್ರದಲ್ಲಿರುವ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲಾಯಿತು.#ಮರಳಿಶಾಲೆಗೆ1/2 pic.twitter.com/8PNAS5iz5p— Dr Sudhakar K (@mla_sudhakar) August 23, 2021ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹ ಸಮಿತಿ ಜೊತೆ ಚರ್ಚೆ ಮಾಡಿ ಎಲ್ಲಾ ತರಗತಿಗಳ ಪ್ರಾರಂಭದ ನಿರ್ಧಾರ ಕೈಗೊಳ್ಳಲಾಗುವುದು ಅಂತ ತಿಳಿಸಿದರು. ವಿದ್ಯಾರ್ಥಿಗಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಶಾಲೆಗಳಿಗೆ ಭೇಟಿ ನೀಡಲಾಗಿದೆ. ಇದೇ ವೇಳೆ ಇಂದಿನಿಂದ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದ್ದು. ಇದೊಂದು ಉತ್ತಮ ಶಿಕ್ಷಣ ನೀತಿ. ಈ ನೀತಿ ಜಾರಿಗೆ ಬರುವ ಮುನ್ನ ಚರ್ಚೆಗೆ ಅವಕಾಶ ಇತ್ತು. ಆಗ ಸಿದ್ದರಾಮಯ್ಯ ನವರು ಸಹ ಸಲಹೆ ಗಳನ್ನ ಕೊಡಬಹುದಿತ್ತು. ಆದರೆ ಈಗ ಅಪಸ್ವರ ಅನುಮಾನ ಪಡೋದಯ ಸರಿಯಲ್ಲ ಎಂದರು.Sign in to your account
Username or Email Address


Password

 Remember Me


