ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಸಂಭ್ರಮ ಮನೆಮಾಡಿದೆ. ಸಪ್ತರಾತ್ರೋತ್ಸವ ಹಿನ್ನೆಲೆ ಸಂಜೆಯಿಂದ ಮಠದ ಆವರಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ನಾಳೆ ರಾಯರ ಪೂರ್ವಾರಾಧನೆ ನಡೆಯಲಿದೆ. ರಾಯರು ಸಶರೀರವಾಗಿ ವೃಂದಾವಸ್ಥರಾಗಿ 350 ವರ್ಷಗಳಾಗುತ್ತದೆ. ಈ ಹಿನ್ನೆಲೆ ಮಠದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತವೆ. ನಿರ್ಮಾಲ್ಯ ವಿಸರ್ಜನೆ, ಉತ್ಸವ,ರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ನಡೆಯಲಿದೆ. ಇದನ್ನೂ ಓದಿ: ಮೋದಿ ಭೇಟಿಗಾಗಿ ಕಾಲ್ನಡಿಗೆ ಯಾತ್ರೆ ಕೈಗೊಂಡ ಕಾಶ್ಮೀರ ಯುವಕಸಂಜೆ ಮಠದ ಆವರಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಆಗಸ್ಟ್ 24 ರಂದು ಮಧ್ಯಾರಾಧನೆ ನಡೆಯಲಿದೆ. ತಿರುಮಲ ತಿರುಪತಿ ದೇವಾಲಯದಿಂದ ರಾಯರಿಗೆ ಪ್ರತೀ ವರ್ಷದಂತೆ ಶೇಷವಸ್ತ್ರ ಸಮರ್ಪಣೆ ನಡೆಯಲಿದೆ. ಆಗಸ್ಟ್ 25 ರಂದು ಮಹಾರಥೋತ್ಸವ ನಡೆಯಲಿದೆ. ವಿವಿಧ ರಾಜ್ಯಗಳಿಂದ ಭಕ್ತರು ದಂಡು ಮಂತ್ರಾಲಯಕ್ಕೆ ಹರಿದು ಬಂದಿದೆ.Sign in to your account
Username or Email Address


Password

 Remember Me


