ಹುಬ್ಬಳ್ಳಿ: ಕ್ರಾಂತಿಕಾರಿ ಅಂದರೆ ಗುಂಡು ಹೊಡೆಯುವುದು ಅಲ್ಲ ಎಂದು ಹೇಳುವ ಮೂಲಕ ನಟ ಚೇತನ್ ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಕುಮಾರಸ್ವಾಮಿಗೆ ಕಾಂತ್ರಿಕಾರಿ ದೃಷ್ಟಿಯಿಲ್ಲ ಅನ್ನೋ ಚೇತನ್ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಕ್ರಾಂತಿಕಾರಿ ಅಂದ್ರೆ ನೀರಾವರಿ. ಶಿಕ್ಷಣ, ಆರೋಗ್ಯ ಹಾಗೂ ಸಾಲ ಇಲ್ಲದಂತೆ ರೈತರು ಬದುಕು ನಡೆಸುವ ಬಗ್ಗೆ ಕ್ರಾಂತಿಕಾರಿ ಎಂದು ಹೇಳಿದ್ದೆ. ಅವರು ನಟರಾದರೆ ನಾನು ಸಿನಿಮಾ ನಿರ್ದೇಶನ ಮಾಡಿದ್ದೇನೆ. ಆ ಕುರಿತು ಹೆಚ್ಚು ಚರ್ಚೆ ಬೇಡ ಎಂದು ಹೇಳಿದರು. ಇದನ್ನೂ ಓದಿ: ಕಿಚ್ಚನ ಹೊಸ ಹೇರ್ ಸ್ಟೈಲ್‍ಗೆ ಫ್ಯಾನ್ಸ್ ಫಿದಾಚೇತನ್ ಹೇಳಿದ್ದೇನು..?
ಕರ್ನಾಟಕವನ್ನು 5 ವರ್ಷಗಳ ಮುನ್ನಡೆಸುವ ಸ್ವಾತಂತ್ರ್ಯವಿದ್ದಿದ್ದರೆ ಕ್ರಾಂತಿಕಾರಿ ಬದಲಾವಣೆಗಳನ್ನು ತರುತ್ತೇನೆಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೊದಲಿಗೆ 2 ಬಾರಿ ಅವರು ಸಿಎಂ ಆಗಿದ್ದಾಗಲೂ ಕೂಡ ನಮ್ಮ ರಾಜ್ಯಕ್ಕೆ ಅಂತಹದೇನೂ ಕ್ರಾಂತಿಕಾರಿ ಮಾಡಲಿಲ್ಲ, ಪ್ರಯತ್ನವನ್ನು ಮಾಡಲಿಲ್ಲ. ಮುಖ್ಯವಾಗಿ ಅವರಿಗೆ ಕ್ರಾಂತಿಕಾರಿ ದೃಷ್ಟಿ ಇಲ್ಲ ಮತ್ತು ಯಥಾಸ್ಥಿತಿ ಚಿಂತನೆ ಪ್ರಕ್ರಿಯೆಯು ಅಧಿಕಾರಕ್ಕೆ ಮುಂಚಿತವಾಗಿರಬೇಕು ಇವುಗಳೆಲ್ಲಾ ನಾನ್ ಸೆನ್ಸ್ ಪದಗಳು ಎಂದು ಚೇತನ್ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ: ಹೆಚ್.ಡಿ. ಕುಮಾರಸ್ವಾಮಿSign in to your account
Username or Email Address


Password

 Remember Me


