ಚಿತ್ರದುರ್ಗ: ಬಿಜೆಪಿಯವರಲ್ಲಿ ತಾಲಿಬಾನ್ ಸಂಸ್ಕೃತಿ ಎದ್ದು ಕಾಣಿಸುತ್ತಿದೆ ಎಂದು ಕಾಂಗ್ರೆಸ್‍ನ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.ಚಿತ್ರದುರ್ಗದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನೂತನ ಕೇಂದ್ರ ಸಚಿವ ಭಗವಂತ ಖೂಬಾ ಅವರ ಪರಿಚಯ ಮಾಡಿಕೊಡುವ ನೆಪದಲ್ಲಿ ನಡೆಸಿದ ಜನಾಶೀರ್ವಾದ ಯಾತ್ರೆ ವೇಳೆ ಯಾದಗಿರಿಯಲ್ಲಿ ಗಾಳಿಯಲ್ಲಿ ಗುಂಡುಹಾರಿಸಿದ್ದಾರೆ. ಈ ಮೂಲಕ ಬಿಜೆಪಿಯವರಲ್ಲಿ ತಾಲಿಬಾನ್ ಸಂಸ್ಕೃತಿ ಎದ್ದು ಕಾಣಿಸುತ್ತಿದೆ. ಈ ಬಗ್ಗೆ ಜವಬ್ದಾರಿಯುತವಾದ ಸ್ಥಾನದಲ್ಲಿದ್ದೂ, ಶಾಂತಿ ಕದಡಿಸಿರುವ ಅವರ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದ, ಅಥವಾ ತಪ್ಪಾಗಿದೆ ಇನ್ಮುಂದೆ ತಿದ್ದಿಕೊಳ್ಳುತ್ತೇವೆ ಎನ್ನಬೇಕಿದ್ದ ಗೃಹ ಸಚಿವರು ಅದರ ಬದಲಾಗಿ ಉಡಾಫೆ ಉತ್ತರ ನೀಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕೇಂದ್ರ ಸಚಿವ ಖೂಬಾಗೆ ಗನ್ ಸ್ವಾಗತಕರ್ನಾಟಕ ರಾಜ್ಯದಲ್ಲಿ ಈ ಬಿಜೆಪಿ ಗುಂಡಿನ ಸಂಸ್ಕೃತಿ ಹುಟ್ಟು ಹಾಕುತ್ತಿದೆ ಎಂಬಂತೆ ಭಾಸವಾಗುತ್ತಿದ್ದು, ಇಂದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮುಂದೆ ಇನ್ಯಾರ ಮೇಲೆ ಹಾರಿಸ್ತಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.ಸಚಿವ ಈಶ್ವರಪ್ಪ, ಹಿಂದೆ ನಮ್ಮ ಸಂಖ್ಯೆ ಕಡಿಮೆ ಇದ್ದಾಗ ಒಂದು ಏಟು ಯಾರಾದರು ಹೊಡೆದರು ಕೂಡ ತಲೆತಗ್ಗಿಸಿಕೊಂಡು ಹೋಗಿ ಅಂತ ನಮ್ಮ ಹಿರಿಯರು ಹೇಳುತ್ತಿದ್ದರು. ಈಗ ಹಾಗೆಲ್ಲಾ ಆಗಲ್ಲ. ಯಾರಾದರು ಒಂದೇಟು ಹೊಡೆದರೆ, ನಾವು ಎರಡು ಏಟು ಹೊಡೆಯುತ್ತೇವೆ ಎಂದಿದ್ದಾರೆ. ಈ ಎಲ್ಲಾ ಸನ್ನಿವೇಶಗಳನ್ನು ಗಮನಿಸಿ ಬಿಜೆಪಿ ನಾಯಕರಿಗೆ ನಾನು ಮನವಿಮಾಡುತ್ತೇನೆ ಗೂಂಡಾ ಹಾಗೂ ತಾಲಿಬಾನ್ ಸಂಸ್ಕೃತಿ ತೋರುವ ಮೂಲಕ ಶಾಂತಿಯುತವಾಗಿರುವ ಕರ್ನಾಟಕವನ್ನು ಬಿಹಾರ ಹಾಗೂ ಉತ್ತರ ಪ್ರದೇಶ ಮಾಡಬೇಡಿ ಎಂದು ಹೇಳಿದರು. ಇದನ್ನೂ ಓದಿ: ಅದು ನಾಡಬಂದೂಕು ಅಲ್ಲ – ಬೆಂಬಲಿಗರ ನಡೆ ಸಮರ್ಥಿಸಿಕೊಂಡ ಸಚಿವ ಭಗವಂತ ಖೂಬಾಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಾಜ್ ಪೀರ್, ಮುಖಂಡರಾದ ಸಂಪತ್ ಕುಮಾರ್ ಇದ್ದರು.






 Advertisement 




Sign in to your account
Username or Email Address


Password

 Remember Me


