ಬೆಳಗಾವಿ: ಕಾಂಗ್ರೆಸ್ ಮಹಾಪಾಲಿಕೆ ಚುನಾವಣೆಯನ್ನ ಪಾರ್ಟಿಯ ಚಿಹ್ನೆಯನ್ನ ಆಧಾರಿಸಿ ಎದುರಿಸಬೇಕೋ, ಬೇಡವೋ ಎಂಬುದರ ಬಗ್ಗೆ  ನಿರ್ಣಯ ಕೈಗೊಂಡಿಲ್ಲವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಶುಕ್ರವಾರದಂದು ಬೆಳಗಾವಿಯಲ್ಲಿ ಮಾತನಾಡಿದ ಅವರು, ಶೇ7.5 ರಷ್ಟು ಮೀಸಲಾತಿಯನ್ನ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾತಿಯನ್ನ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿದ್ದೇವೆ. ಸಿಎಂ ಬೊಮ್ಮಾಯಿ ಅವರಿಂದ ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ. ಅಲ್ಲದೇ ಇದಕ್ಕೆ ಸ್ವಲ್ಪ ಸಮಯ ನೀಡಬೇಕಾಗುತ್ತದೆ. ಅವರು ಅಧ್ಯಯನ ಮಾಡಿ ಕ್ರಮಕೈಗೊಳ್ಳಲಿ. ಯಾವುದೇ ಸರ್ಕಾರವಿದ್ಧರೂ ಇಚ್ಛಾಶಕ್ತಿಯ ಅಭಾವದಿಂದ ಬೇಡಿಕೆ ಈಡೇರಿಲ್ಲ. ಬಿಜೆಪಿ ಸರ್ಕಾರವಾದರೂ ಈಡೇರಿಸುತ್ತದೆಯೇ ಎಂಬುದನ್ನ ಕಾಯ್ದು ನೋಡಬೇಕಿದೆ ಎಂದಿದ್ದಾರೆ. ಇದನ್ನೂ ಓದಿ: ವಧು, ವರರಿಗೆ ಪೆಟ್ರೋಲ್ ಗಿಫ್ಟ್ ಕೊಟ್ಟ ಹಾಸ್ಯ ನಟಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯನ್ನ ಪಕ್ಷದ ಚಿಹ್ನೆಯ ಮೇಲೆ ನಡೆಸಬೇಕೋ ಬೇಡವೋ ಎಂಬುದರ ಬಗ್ಗೆ ಅಂತಿಮವಾಗಿ ತೀರ್ಮಾನಿಸಿಲ್ಲ. ಬೇರೆಯವರಂತೆ ನಾವೂ ಮಾಡಲ್ಲ ನಮ್ಮ ಪಾರ್ಟಿಗೂ ತನ್ನದೇಯಾದ ಸಿದ್ಧಾಂತವಿದೆ ಎಂದರು. ಇದನ್ನೂ ಓದಿ: ಬೆಣ್ಣೆ ನಗರಿಯಲ್ಲಿ ಕಲಬೆರಕೆ ಬೆಣ್ಣೆ ಮಾರಾಟ ದಂಧೆ- ಓರ್ವ ಅರೆಸ್ಟ್ಬೆಳಗಾವಿ ಮತ್ತು ಹುಬ್ಬಳ್ಳಿ ಸೇರಿದಂತೆ ಎಲ್ಲೆಡೆ ಸಮಿತಿಯನ್ನ ನೇಮಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದು, ನಮಗೆ ಜನ ಬೆಂಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.Sign in to your account
Username or Email Address


Password

 Remember Me


