ವಿಜಯಪುರ: ಮಹಾರಾಷ್ಟ್ರದಲ್ಲಿ ಕೊರೊನಾ ಮೂರನೇ ಅಲೆ ತಾಂಡವ ಆಡುತ್ತಿದೆ. ಇದರಿಂದ ಮಹಾರಾಷ್ಟ್ರಕ್ಕೆ ಗಡಿ ಹಂಚಿಕೊಂಡಿರುವ ವಿಜಯಪುರದಲ್ಲಿ ಆತಂಕ ಮನೆ ಮಾಡಿದೆ.ಮಹಾರಾಷ್ಟ್ರ ಗಡಿಯ ವಿಜಯಪುರದ ಹಳ್ಳಿಗಳಲ್ಲಿ ಈ ಬಾರಿ ಅದ್ಧೂರಿಯಾಗಿ ಮೊಹರಂ ಆಚರಣೆ ನಡೆದಿದೆ. ಜಿಲ್ಲಾಡಳಿತದ ನಿಷೇಧದ ಮಧ್ಯವೇ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚವಡಿಹಾಳ ಗ್ರಾಮದಲ್ಲಿ ಅದ್ಧೂರಿ ಮೊಹರಂ ಆಚರಣೆ ಮಾಡಲಾಗಿದೆ. ಕೊರೊನಾ ಮೂರನೇ ಅಲೆ ತಡೆಯಲು ಜಿಲ್ಲಾಡಳಿತ ಮೊಹರಂ ಹಾಗೂ ಇತರೆ ಆಚರಣೆಗೆ ನಿಷೇಧಿಸಿದೆ. ಆದರೂ ನಿಷೇಧಕ್ಕೆ ಕ್ಯಾರೆ ಅನ್ನದ ಅದ್ದೂರಿಯಾಗಿ ಜನರು ಮೊಹರಂ ಆಚರಿಸಿದ್ದಾರೆ. ಇದನ್ನೂ ಓದಿ:ಕಾರು, ಬೈಕ್ ಮಧ್ಯೆ ಅಪಘಾತ- ಮೂವರು ಸ್ಥಳದಲ್ಲೇ ಸಾವುಅಧಿಕ ಸಂಖ್ಯೆಯಲ್ಲಿ ಜನರು ಜಮಾಯಿಸಿ, ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡದೇ ಬೇಕಾಬಿಟ್ಟಿ ವರ್ತನೆ ಮಾಡಿದ್ದಾರೆ. ಕೊರೊವೆ. ನಿಷೇಧದ ಮಧ್ಯೆಯೇ ಈ ರೀತಿ ಅದ್ದೂರಿಯಾಗಿ ಮೊಹರಂ ಆಚರಣೆ ಮಾಡುತ್ತಿದ್ದರೂ ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ ಯಾಕೆ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ:ವಿಚಾರಣಾಧೀನ ಖೈದಿ ಜೈಲಿನಲ್ಲಿ ಸಾವುSign in to your account
Username or Email Address


Password

 Remember Me


