ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಇಂದಿನಿಂದ 3 ದಿನ ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದೆ.ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲೂ ಮಳೆ ಹೆಚ್ಚಾಗಿದೆ. ಇಂದು ಸಂಜೆ ಸಹ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.ನಗರಗಳ ಇಂದಿನ ಹವಾಮಾನ ವರದಿ:ಬೆಂಗಳೂರು: 27-19
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 26-20
ಮೈಸೂರು: 28-20ಮಂಡ್ಯ: 28-21
ರಾಮನಗರ: 28-21
ಮಡಿಕೇರಿ: 21-16
ಹಾಸನ: 25-19
ಚಾಮರಾಜನಗರ: 28-21ಚಿಕ್ಕಬಳ್ಳಾಪುರ: 27-19
ಕೋಲಾರ: 28-20
ತುಮಕೂರು: 27-20
ಉಡುಪಿ: 28-24
ಕಾರವಾರ: 28-24ಚಿಕ್ಕಮಗಳೂರು: 27-19
ದಾವಣಗೆರೆ: 28-21
ಚಿತ್ರದುರ್ಗ: 27-21
ಹಾವೇರಿ: 28-21ಗದಗ: 27-21
ಕೊಪ್ಪಳ: 29-22
ರಾಯಚೂರು: 31-23
ಯಾದಗಿರಿ: 29-23ವಿಜಯಪುರ: 27-19
ಬೀದರ್: 24-21
ಕಲಬುರಗಿ: 28-22
ಬಾಗಲಕೋಟೆ: 29-22






 Advertisement 




Sign in to your account
Username or Email Address


Password

 Remember Me


