ಹಾಸನ: ಬಾಯಿ, ಕಾಲಿಗೆ ಹಗ್ಗ ಕಟ್ಟಿ ಪುಟ್ಟ ಗೂಡ್ಸ್ ವಾಹನದಲ್ಲಿ 100 ಕರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಅಪಘಾತವಾಗಿ 50 ಮೂಕ ಪ್ರಾಣಿಗಳು ಬಲಿಯಾಗಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ, ದ್ಯಾವಪ್ಪನಹಳ್ಳಿ ಗ್ರಾಮದ ಬಳಿ ರಾತ್ರಿ ನಡೆದಿದೆ.ಹಾಸನದಲ್ಲಿ 38 ಮಂಗಗಳ ಮಾರಣಹೋಮ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಪುಟ್ಟ ಗೂಡ್ಸ್ ವಾಹನದಲ್ಲಿ 100 ಕರುಗಳ ಸಾಗಿಸಲಾಗುತ್ತಿತ್ತು. ಗೋಹತ್ಯೆ ನಿಷೇಧ ಇರುವುದರಿಂದ ದುಷ್ಟರು ರಾತ್ರೋ ರಾತ್ರಿ ಗೋವುಗಳನ್ನು ಸಾಗಿಸುತ್ತಿದ್ದರು. ಬಾಯಿ, ಕಾಲಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಮೂಕ ಪ್ರಾಣಿಗಳ ಸಾಗಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಅಲ್ಲ, ಕೈಗೆ ಸಿಗದ ದ್ರಾಕ್ಷಿ ಹುಳಿ ಅಂತಿದ್ದಾರೆ: ಶೋಭಾ ಕರಂದ್ಲಾಜೆಗೂಡ್ಸ್ ಆಟೋದಲ್ಲಿ ಉಸಿರುಗಟ್ಟಿ ಹಲವು ಕರುಗಳ ಸಾವನ್ನಪ್ಪಿದ್ದು, ಅಪಘಾತದ ಬಳಿಕ ಮತ್ತಷ್ಟು ಕರುಗಳು ಬಲಿಯಾಗಿವೆ. ಒಟ್ಟು 50ಕ್ಕೂ ಹೆಚ್ಚು ಕರುಗಳ ಸಾವನ್ನಪ್ಪಿದ್ದು, ಉಳಿದ 50 ಕರುಗಳನ್ನು ರಕ್ಷಣೆ ಮಾಡಲಾಗಿದೆ. ಶಾಸಕ ಕೆ.ಎಸ್.ಲಿಂಗೇಶ್ ಸ್ವತಃ ಸ್ಥಳಕ್ಕೆ ಹೋಗಿ ಕರುಗಳ ರಕ್ಷಣೆ ಮಾಡಿದ್ದಾರೆ. ಘಟನೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.ಜುಲೈ 28 ರಂದು 38 ಮಂಗಗಳ ಮಾರಣಹೋಮ ನಡೆದಿತ್ತು. ಘಟನೆ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿ, ಹೈಕೋರ್ಟ್ ತನಿಖೆ ನಡೆಸುತ್ತಿದೆ. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ತಾಲೂಕು ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಸ್ವತಃ ವಿಡಿಯೋ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಬೇಲೂರು ಶಾಸಕ ಲಿಂಗೇಶ್ ಸಹ ಆಗ್ರಹಿಸಿದ್ದಾರೆ.Sign in to your account
Username or Email Address


Password

 Remember Me


