ಯಾದಗಿರಿ: ಜನಾರ್ಶೀವಾದ ಕಾರ್ಯಕ್ರಮಕ್ಕೆ ಯಾದಗಿರಿಗೆ ಆಗಮಿಸಿದ ಕೇಂದ್ರ ಸಚಿವ ಖೂಬಾ ಅವರ ಸ್ವಾಗತಕ್ಕೆ ಜನ ನಾಡಬಂದೂಕು ಸಿಡಿಸಿ ಭರ್ಜರಿಯಾಗಿ ಸ್ವಾಗತ ಮಾಡಿದ್ದು ಚರ್ಚೆಗೆ ಗ್ರಾಸವಾಗಿದೆ.ಯರಗೋಳ ಗ್ರಾಮದಲ್ಲಿ ಜನ ಕೇಂದ್ರ ಸಚಿವ ಭಗವಂತ ಖೂಬಾ ಆಗಮನ ಮಾಡುತ್ತಿದ್ದಂತೆ ನಾಡಬಂದೂಕು ಕೈಯಲ್ಲಿ ಹಿಡಿದುಕೊಂಡು ಪುಷ್ಪವನ್ನು ಅರ್ಪಿಸಿ ಭರ್ಜರಿ ಸ್ವಾಗತ ಮಾಡಿದ್ದಾರೆ. ಯಾದಗಿರಿ ತಾಲೂಕಿನ ಯರಗೋಳ ಗ್ರಾಮಕ್ಕೆ ಖೂಬಾ ಆಗಮಿಸಿದ್ದರು. ಇದನ್ನೂ ಓದಿ:  ಡಾ.ಜಿ ಪರಮೇಶ್ವರ್ ಮುಂದಿನ ಮುಖ್ಯಮಂತ್ರಿಯಾಗಬೇಕು: ಜೆಡಿಎಸ್ ಶಾಸಕಜನಾರ್ಶೀವಾದ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಜನ ಜಾತ್ರೆ ಸೇರಿತ್ತು. ಜನಾರ್ಶೀವಾದ ಕಾರ್ಯಕ್ರಮಕ್ಕೆ ಭಾಗವಹಿಸಲು ಆಗಮಿಸಿದ ಭಗವಂತ ಖೂಬಾ ಅವರನ್ನು ಮಾಜಿ ಸಚಿವ ಬಾಬೂರಾವ್ ಚಿಂಚನಸೂರು, ಶಾಸಕರಾದ ರಾಜೂಗೌಡ, ವೆಂಕಟರೆಡ್ಡಿ ಮುದ್ನಾಳ ಸ್ವಾಗತಮಾಡಿಕೊಂಡಿದ್ದಾರೆ.Sign in to your account
Username or Email Address


Password

 Remember Me


