ರಾಯಚೂರು: ಕೊರೊನಾ ಲಾಕ್‍ಡೌನ್ ಬಳಿಕ ರಾಯರ ಭಕ್ತರಿಗೆ ಅನುಕೂಲವಾಗಲಿ ಅಂತ ಇನ್ಫೋಸಿಸ್ ಫೌಂಡೇಶನ್ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಒಂದು ಲಾರಿ ಆಹಾರ ಪದಾರ್ಥಗಳನ್ನ ವಿತರಣೆ ಮಾಡಿದೆ.ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ, ಸುಧಾಮೂರ್ತಿ ದಂಪತಿಗಳಿಂದ ಆಹಾರ ಧಾನ್ಯ ವಿತರಣೆಯಾಗಿದ್ದು, ಅಕ್ಕಿ ,ಬೇಳೆ, ಅಡುಗೆ ಎಣ್ಣೆ ಸೇರಿ ಆಹಾರ ಧಾನ್ಯ ಹಾಗೂ ಅಗತ್ಯ ವಸ್ತುಗಳನ್ನ ಬೆಂಗಳೂರಿನಿಂದ ರವಾನೆ ಮಾಡಿದ್ದಾರೆ.ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಇನ್ಫೋಸಿಸ್ ಫೌಂಡೇಶನ್ ಗೆ ಅಭಿನಂದನೆ ಸಲ್ಲಿಸಿದ್ದಾರೆ. ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ಅವರ ಕಾರ್ಯಕ್ಕೆ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ಫೋಸಿಸ್ ನೀಡಿದ ಆಹಾರ ಧಾನ್ಯಗಳನ್ನ ಮಠ ಭಕ್ತರ ಪ್ರಸಾದಕ್ಕೆ ಬಳಕೆ ಮಾಡಲಿದೆ. ಇದನ್ನೂ ಓದಿ: ಸುನಂದಾ ಪುಷ್ಕರ್ ಪ್ರಕರಣ – 7 ವರ್ಷಗಳ ಬಳಿಕ ಶಶಿ ತರೂರ್​​​ಗೆ ರಿಲೀಫ್https://www.youtube.com/watch?v=XwmWvnmsHmYSign in to your account
Username or Email Address


Password

 Remember Me


