ತುಮಕೂರು: ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ತಾಲ್ಲೂಕಿನ ಕರೀಕೆರೆ ಗ್ರಾಮದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಚಂದನ್(16) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಶಶಾಂಕ್(16) ಮತ್ತು ಪವನ್(22)ರನ್ನು ತುಮಕೂರಿನ ಶ್ರೀದೇವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕರೀಕೆರೆ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ಚಂದನ್, ಶಶಾಂಕ್, ಪವನ್ ವಿದ್ಯುತ್ ತಗುಲಿದೆ. ಹೀಗಾಗಿ ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಚಂದನ್ ಕೊನೆಯುಸಿರೆಳೆದಿದ್ದಾರೆ.ಇದೀಗ ಮೃತ ಚಂದನ್ ಕುಟುಂಬಕ್ಕೆ ಇಲಾಖೆಯಿಂದ ಆರ್ಥಿಕ ನೆರವು ನೀಡುತ್ತೇವೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಇಲಾಖೆ ಭರಿಸುತ್ತದೆ ಎಂದು ಡಿಡಿಪಿಐ ನಂಜಪ್ಪ ಹೇಳಿದ್ದಾರೆ. ಈ ಪ್ರಕರಣ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಳುಗಳ ಆರೋಗ್ಯ ವಿಚಾರಿಸಲು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ:10 ಸಾವಿರ ಮಂದಿಯಿಂದ ಮೆರವಣಿಗೆ – ಕೊರೊನಾ ರೂಲ್ಸ್ ಉಲ್ಲಂಘನೆ






 Advertisement 




Sign in to your account
Username or Email Address


Password

 Remember Me


