ಕಾರವಾರ: ಕಾಡಿನಲ್ಲಿದ್ದ ಜಿಂಕೆಯನ್ನು ಹಿಡಿದು ಆರು ತಿಂಗಳ ಕಾಲ ಅಕ್ರಮವಾಗಿ ಹಿಡಿದಿಟ್ಟುಕೊಂಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಲಕೊಪ್ಪದಲ್ಲಿ ಘಟನೆ ನಡೆದಿದೆ. ಸಂಚಾರಿ ಅರಣ್ಯ ಘಟಕ ದಳದವರು ಮನೆ ಮೇಲೆ ದಾಳಿ ನಡೆಸಿ, ವ್ಯಕ್ತಿಯನ್ನು ಬಂಧಿಸಿದ್ದಾರೆ. ಹಬೀಬ್ ರೆಹಮಾನ ಮಹ್ಮದ್ ಸಾಬ್(46) ಬಂಧಿತ ಆರೋಪಿ. ಕಾಡಿನಲ್ಲಿದ್ದ ಜಿಂಕೆಯನ್ನು ಹಿಡಿದು ಬಂಧಿಸಿ ಆರು ತಿಂಗಳಿಂದ ಮನೆಯಲ್ಲಿ ಇಟ್ಟುಕೊಂಡಿದ್ದ.ಖಚಿತ ಮಾಹಿತಿ ಮೇರೆಗೆ ದಾಂಡೇಲಿ ಸಂಚಾರಿ ಅರಣ್ಯ ಪೊಲೀಸ್ ದಳ ದಾಳಿ ನಡೆಸಿದ್ದಾರೆ. ಆರೋಪಿಯನ್ನು ಆರಣ್ಯ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯದ ವಶಕ್ಕೆ ನೀಡಿದ್ದು, ಆರೋಪಿಯನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಜಿಂಕೆಯನ್ನು ವಶಪಡಿಸಿಕೊಂಡು ಶಿರಸಿ ಅರಣ್ಯ ಇಲಾಖೆ ಸುಪರ್ದಿಗೆ ನೀಡಿದ್ದು, ಕಾರ್ಯಾಚರಣೆಯಲ್ಲಿ ದಾಂಡೇಲಿ ಸಿ.ಐ.ಡಿ ಅರಣ್ಯ ಘಟಕದ ಪಿ.ಎಸ್.ಐ. ಮಂಜುನಾಥ ಬೋರಕರ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.Sign in to your account
Username or Email Address


Password

 Remember Me


