ಬೆಂಗಳೂರು: ಆಗಸ್ಟ್ 15ರವರೆಗೆ ಬೆಂಗಳೂರಿನಲ್ಲಿ ಯಾವುದೇ ಕಠಿಣಕ್ರಮ ಇರುವುದಿಲ್ಲ, ಕರ್ಫ್ಯೂ ಇರುವುದಿಲ್ಲ. ಅದಾದ ಬಳಿಕ ಪರಿಸ್ಥಿತಿ ನೋಡಿಕೊಂಡು ಕ್ರಮ ಕೈಗೊಳ್ಳಲಾಗುವುದು. ನಂತರ ಕರ್ಫ್ಯೂ ಆಗಲೂಬಹುದು, ಆಗದೆಯೂ ಇರಬಹುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಕಂದಾಯ ಸಚಿವ ಆರ್ ಅಶೋಕ್ ಕೋವಿಡ್ ನಿಯಂತ್ರಣ ಸಂಬಂಧ ಸಭೆ ನಡೆಸಿ, ಹಲವು ತೀರ್ಮಾನಗಳನ್ನು ಕೈಗೊಂಡರು.ಆಗಸ್ಟ್ 15ರ ಬಳಿಕ ಹಲವು ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಈ ತಿಂಗಳಲ್ಲಿ ಸಾಲು ಸಾಲು ಹಬ್ಬಗಳು ಬರಲಿವೆ. ದೇವಸ್ಥಾನಗಳಿಗೆ ಹೆಚ್ಚು ಜನ ಬರುವ ಸಾಧ್ಯತೆ ಇದೆ. ಹೀಗಾಗಿ ದೇವಸ್ಥಾನಗಳಿಗೆ ನಿಬರ್ಂಧ ಮಾಡುವ ಬಗ್ಗೆ ಹೆಚ್ಚಿನ ಗಮನ ಕೊಡಲಾಗುವುದು ಎಂದರು. ನಿರಂತರ ಹಬ್ಬ ಬರುವುದರಿಂದ ಮುಂಜಾಗ್ರತ ಕ್ರಮ ಕೈಗೊಳ್ಳಬೇಕಿದೆ. ಈ ತಿಂಗಳು ಪೂರ್ತಿ ನಿಯಮ ತರುವ ಬಗ್ಗೆ ಆಡಳಿತ ಮಂಡಳಿಯ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.ಶಾಲೆಗಳನ್ನು ಆರಂಭಿಸಲು ತಜ್ಞರು ಅಭಿಪ್ರಾಯ ಕೊಟ್ಟಿದ್ದಾರೆ. ಹೀಗಾಗಿ ಹಂತಹಂತವಾಗಿ ಆರಂಭಿಸಲಾಗುವುದು. ಪಾಸಿಟಿವಿಟಿ ಶೇ.2-3 ಹೆಚ್ಚಾದರೆ ಹೆಚ್ಚಾದರೆ ಕರ್ಫ್ಯೂ ಬಗ್ಗೆ ಚಿಂತಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ : ನನಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡ: ಅರಗ ಜ್ಞಾನೇಂದ್ರಜಿಮ್ ಬಂದ್:
ಕೋವಿಡ್ ಹೆಚ್ಚಾಗಿ ಅಪಾರ್ಟ್ ಮೆಂಟ್ ಗಳಲ್ಲೇ ಕಂಡುಬರುತ್ತಿರುವುದರಿಂದ ಕೋವಿಡ್ ಸೋಂಕು ಕಂಡುಬರುವ ಅಪಾರ್ಟ್ ಮೆಂಟ್ ಗಳ ಜಿಮ್, ಸ್ವಿಮ್ಮಿಂಗ್ ಪೂಲ್ ಬಂದ್ ಮಾಡಿಸಲಾಗುವುದು. ಮಾರ್ಷಲ್ಸ್ ಕೂಡಾ ಭೇಟಿ ನೀಡಿ ಪರಿಶೀಲಿಸಬಹುದು. ಯಾರೂ ತಡೆಯುವಂತಿಲ್ಲ. ಜೊತೆಗೆ ಕೋವಿಡ್ ಸೋಂಕು ಕಂಡು ಬಂದ ಅಪಾರ್ಟ್ ಮೆಂಟ್ ಸದಸ್ಯರ ಆರೋಗ್ಯ ಪರಿಶೀಲಿಸಬೇಕು. ಆ ಒಂದು ಮಳಿಗೆಯನ್ನು ಸೀಲ್ ಡೌನ್ ಮಾಡಲಾಗುವುದು ಎಂದರು.ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ, ನಗರದ ಪ್ರತಿ ಮನೆಗೂ ಭೇಟಿ ನೀಡಲು ವೈದ್ಯಾಧಿಕಾರಿಗಳ 108 ತಂಡ ಆಗಸ್ಟ್ 16 ರಿಂದ ಕೆಲಸ ಆರಂಭಿಸಲಿದೆ. ಮನೆ ಬಾಗಿಲಿಗೆ ಪಾಲಿಕೆಯ ವೈದ್ಯರು ಎಂಬ ಯೋಜನೆಯಡಿ, ಪ್ರತೀ ಮನೆಗೂ ಹೋಗಿ ಮನೆಯ ಎಲ್ಲಾ ಸದಸ್ಯರ ಆರೋಗ್ಯ ಪರಿಸ್ಥಿತಿಯ ಚೆಕ್ ಲಿಸ್ಟ್ ಮಾಡಿಕೊಳ್ಳಬೇಕು. ಲಸಿಕೆ ಮಾಹಿತಿಯನ್ನೂ ಪಡೆದು ಎಲ್ಲವನ್ನೂ ಮೊಬೈಲ್ ನಲ್ಲಿ ಅಪ್ಲೋಡ್ ಮಾಡುವ ಕೆಲಸ ಆರಂಭವಾಗಲಿದೆ ಎಂದು ತಿಳಿಸಿದರು.ಕೋವಿಡ್ ಪಾಸಿಟಿವ್ ಎಂದು ಗೊತ್ತಾದ ಆರು ಗಂಟೆಯ ಒಳಗೆ ವೈದ್ಯರ ತಂಡ, ಭೇಟಿ ನೀಡಲಿದೆ. ಇದಲ್ಲದೆ ಕೋವಿಡ್ ಇದ್ದರೂ ಇರದಿದ್ದರೂ, ವೈದ್ಯರ ತಂಡ ಮನೆಮನೆ ಬಾಗಿಲಿಗೆ ಭೇಟಿ ನೀಡಲಿದೆ. ಪ್ರತೀ ಮನೆಗೂ ಒಂದು ಕ್ಷೇತ್ರದ ಎರಡು ವಾರ್ಡ್ ಗಳಲ್ಲಿ ಪೈಲೆಟ್ ಯೋಜನೆ ಜಾರಿಯಾಗಲಿದೆ. ಇದರಿಂದ ನಗರದ ಜನರ ಪೂರ್ಣ ಚಿತ್ರಣ ಸಿಗಲಿದೆ. ರೋಗಿಗಳ ರಕ್ಷಣೆ, ರೋಗ ಬಾರದಂತೆ ತಡೆಗಟ್ಟಲು, ವ್ಯಾಕ್ಸಿನೇಷನ್ ಪಡೆಯಲು “ಮನೆಬಾಗಿಲಿಗೆ ಕಾರ್ಪೋರೇಷನ್  ವೈದ್ಯರು” ಎಂಬ ಮೂಲಕ ನಡೆಯಲಿದೆ. ಸರ್ಕಾರದ ನಿರ್ದೇಶನದ ಪ್ರಕಾರ ವಾರ್ಡ್ ಗೆ ಒಬ್ಬರಂತೆ, 198 ವೈದ್ಯರನ್ನು 60 ಸಾವಿರ ರೂ. ಸಂಬಳ ನೀಡಿ ಗುತ್ತಿಗೆಗೆ ತೆಗೆದುಕೊಳ್ಳಲಾಗುವುದು ಎಂದರು.ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಇಬ್ಬರು ವೈದ್ಯರು ಇರಲಿದ್ದಾರೆ. ಕೋವಿಡ್ ಸೋಂಕಿತರಿಗೆ ಕೊಟ್ಟ ಕಿಟ್ ನಿಂದ ಏನಾದರೂ ಅಡ್ಡ ಪರಿಣಾಮಗಳಾದರೆ, ಬೇರೆ ಮೆಡಿಸಿನ್ ಸಲಹೆ ನೀಡಲು ಪ್ರತೀ ಕ್ಷೇತ್ರದಲ್ಲಿ ಇಬ್ಬರು ಹೆಚ್ಚುವರಿ ವೈದ್ಯರು ಕೋವಿಡ್ ಗಾಗಿಯೇ ಮೀಸಲಾಗಿ ಇರಲಿದ್ದಾರೆ. ಇವರ ಹೆಸರು, ಸಂಪರ್ಕ ಸಂಖ್ಯೆಯನ್ನು ಕಿಟ್ ನಲ್ಲಿಯೇ ನಮೂದಿಸಿ ಇಡಲಾಗುತ್ತದೆ ಎಂದು ವಿವರಿಸಿದರು.ಬೆಂಗಳೂರಲ್ಲಿಯೂ ಕೇರಳದ ಪರಿಸ್ಥಿತಿ ನಿರ್ಮಾಣ ಆಗದಿರಲು, ಕರ್ಫ್ಯೂ ಜಾರಿಯಾಗದಂತೆ ಇರಲು ಎಲ್ಲರೂ ಮಾಸ್ಕ್ ಧರಿಸಬೇಕು. ಹೋಟೆಲ್, ರೆಸ್ಟೋರೆಂಟ್ ನಲ್ಲಿ ಹೇಗಿರಬೇಕು ಎಂಬ ಗೈಡ್ ಲೈನ್ಸ್ ಬಿಡುಗಡೆ ಮಾಡಲಾಗುವುದು ಎಂದರು.Sign in to your account
Username or Email Address


Password

 Remember Me


