ರಾಯಚೂರು: ಇಂದಿನಿಂದ ಶ್ರಾವಣ ಮಾಸ ಪ್ರಾರಂಭವಾಗಿದ್ದು, ಜಿಲ್ಲೆಯ ಈಶ್ವರ ದೇವಾಲಯಗಳಲ್ಲಿ ಒಂದು ತಿಂಗಳ ಪೂರ್ತಿ ವಿಶೇಷ ಪೂಜೆ, ಭಜನೆಗಳು ನಡೆಯುತ್ತಿವೆ. ಕೋವಿಡ್ ಹಿನ್ನೆಲೆ ಜಿಲ್ಲಾಡಳಿತ ಷರತ್ತುಗಳ ಮೇಲೆ ವಿಶೇಷ ಪೂಜೆ ಅಭಿಷೇಕಗಳನ್ನು ಮಾಡಲು ಅನುಮತಿ ನೀಡಿದೆ. ಆದರೆ ರಾಯಚೂರು ನಗರದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಎಲ್ಲಾ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಲಾಗಿದೆ.ಜಿಲ್ಲಾಡಳಿತದ ಆದೇಶವನ್ನ ಅಕ್ಷರಶಃ ಉಲ್ಲಂಘಿಸಿ ಪೂಜೆಗಳನ್ನು ಮಾಡಲಾಗುತ್ತಿದೆ. ಭಕ್ತರು ಕೋವಿಡ್ ನಿಯಮ ಪಾಲಿಸಲು ಯಾವುದೇ ವ್ಯವಸ್ಥೆಗಳನ್ನು ಮಾಡಿಲ್ಲ. ಸಾಮಾಜಿಕ ಅಂತರ ಕಾಪಾಡಲು ಮಾರ್ಕ್ ಮಾಡಿಲ್ಲ, ಸ್ಯಾನಿಟೈಸರ್ ವ್ಯವಸ್ಥೆಯಿಲ್ಲ. ವಿಶೇಷ ಪೂಜೆ ಮಾಡಿಸುವ ಭಕ್ತರನ್ನು ಗರ್ಭಗುಡಿಯೊಳಗೆ ಬಿಟ್ಟುಕೊಳ್ಳುವ ಮೂಲಕ ಕೋವಿಡ್ ನಿಯಮಗಳನ್ನು ಇಲ್ಲಿನ ಅರ್ಚಕರು ಹಾಗೂ ಆಡಳಿತ ಮಂಡಳಿ ಉಲ್ಲಂಘಿಸಿದೆ.ಭಕ್ತರು ಸಹ ಸಾಮಾಜಿಕ ಅಂತರ ಕಾಪಾಡದೇ, ಮಾಸ್ಕ್ ಸಹ ಧರಿಸದೇ ದೇವರ ದರ್ಶನ ಪಡೆಯುತ್ತಿದ್ದಾರೆ. ಶ್ರಾವಣ ಮಾಸದ ನೆಪದಲ್ಲಿ ದೇವಾಲಯಗಳೇ ಕೊರೊನಾ ಹಾಟ್ ಸ್ಪಾಟ್ ಆಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕಿದೆ. ಶ್ರಾವಣ ಮಾಸದ ಸೋಮವಾರಗಳು ಮುಕ್ತಿಯ ಸೋಪಾನಗಳು ಎಂಬುದು ಶಿವಭಕ್ತರ ನಂಬಿಕೆ. ಹೀಗಾಗಿ ಶ್ರಾವಣ ಸೋಮವಾರ ದಿನ ದೇವಾಲಯಗಳಿಗೆ ಹೆಚ್ಚು ಜನ ಬರುತ್ತಾರೆ. ಕೋವಿಡ್ ನಿಯಮ ಪಾಲನೆ ಅಗತ್ಯವಾಗಿದೆ. ಇದನ್ನೂ ಓದಿ:ಕೋವಿಶೀಲ್ಡ್, ಕೋವ್ಯಾಕ್ಸಿನ್ ಮಿಶ್ರಾ ಲಸಿಕೆ ಪಡೆದರೆ ಅಡ್ಡಪರಿಣಾಮವಿಲ್ಲ: ಐಸಿಎಂಆರ್






 Advertisement 




Sign in to your account
Username or Email Address


Password

 Remember Me


