ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ (Yatindra Siddaramaiah) ಅವರಿಗೆ ಪರಿಷತ್ ಸ್ಥಾನ ಬಹುತೇಕ ಫಿಕ್ಸ್ ಎನ್ನಲಾಗಿದ್ದು, ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ನೇತೃತ್ವದ ಸಭೆಯಲ್ಲೂ ಈ ಬಗ್ಗೆ ಸಚಿವರಿಗೆ ಸುಳಿವು ಸಿಕ್ಕಿದೆ.ಎಂಎಲ್‍ಸಿ ಆಯ್ಕೆ ವಿಚಾರವಾಗಿ ಮೇ 28, 29 ರಂದು ಸಿಎಂ ಹಾಗೂ ಡಿಸಿಎಂ ದೆಹಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಇಂದು (ಮೇ 25) ಡಿಸಿಎಂ ಕೆಲವು ಸಚಿವರ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಸಭೆಯ ಬಳಿಕ ಈ ವಿಚಾರವನ್ನು ಸತೀಶ್ ಜಾರಕಿಹೊಳಿ (Satish Jarkiholi) ಮಾಧ್ಯಮಗಳೊಂದಿಗೆ ಮಾತನಾಡಿ, ಸಿಎಂ ಪುತ್ರ ಯತೀಂದ್ರಗೆ ವಿಧಾನ ಪರಿಷತ್ ಸ್ಥಾನ ಸಿಕ್ಕೇ ಸಿಗಲಿದೆ. ಸರ್ಕಾರ ರಚನೆಯ ಸಂದರ್ಭದಲ್ಲಿ ಅದರ ಬಗ್ಗೆ ಮಾತುಕತೆ ಆಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಬುದ್ಧಾ ಹತ್ಯೆಯನ್ನು ಆತ್ಮಹತ್ಯೆ ಅಂತಾ ಬಿಂಬಿಸಲು ಪ್ಲಾನ್- ಕುತ್ತಿಗೆ, ಕೈಯಲ್ಲಿದ್ದ ಕಲೆಗಳನ್ನೇ ಬಂಡವಾಳ ಮಾಡಿಕೊಂಡಿದ್ದ ಅಪ್ರಾಪ್ತಡಿಸಿಎಂ ಜೊತೆಗೆ ಎಂಎಲ್‍ಸಿ ಚುನಾವಣೆ (MLC Election) ವಿಚಾರ ಚರ್ಚೆ ಆಯ್ತು. ಪಕ್ಷಕ್ಕಾಗಿ ದುಡಿದವರು ತುಂಬಾ ಜನ ಇದ್ದಾರೆ. ಅವರನ್ನ ಪರಿಗಣಿಸಿ ಎಂದು ಹೇಳಿದ್ದೇವೆ. ವಿಧಾನ ಪರಿಷತ್ ಸದಸ್ಯ ಸ್ಥಾನ ಬೆಂಗಳೂರಿಗೆ ಸೀಮಿತ ಆಗಬಾರದು. ಜಾತಿವಾರು ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕು ಎಂದು ಹೇಳಿದ್ದೇವೆ ಎಂದರು.ಕೆಲವರು ಅನಿವಾರ್ಯವಾಗಿ ರಿಪೀಟ್ ಆಗಲೇಬೇಕು. ಲಂಬಾಣಿ ಸಮುದಾಯ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಬೇಕು ಎಂದು ನಮ್ಮ ಒತ್ತಾಯವಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ- ಆರೋಪಿ ಅಪ್ರಾಪ್ತನ ಅಜ್ಜ ಅರೆಸ್ಟ್‌Sign in to your account
Username or Email Address


Password

 Remember Me


