ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ನಿಧಾನವಾಗಿ ಜಾಸ್ತಿಯಾಗುತ್ತಿದೆ. ಜಿಲ್ಲೆಯಲ್ಲಿ 1368 ಸಕ್ರಿಯ ಪ್ರಕರಣ ಇವೆ. ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಸೆಂಟರ್ ಶಿಫ್ಟ್ ಮಾಡುವ ನಿರ್ಣಯ ಮಾಡಿದ್ದೇವೆ ಎಂದು ಉಡುಪಿ ಜಿಲ್ಲಾ ಕೋವಿಡ್ ಉಸ್ತುವಾರಿ ಸುನಿಲ್ ಕುಮಾರ್ ಹೇಳಿದ್ದಾರೆ.ಉಡುಪಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ವೈದ್ಯರ ಸಭೆ ನಡೆಯುತು. ಕೊರೊನಾ ನಿಯಂತ್ರಣ ಬಗ್ಗೆ ಚರ್ಚೆ ನಡೆಸಲಾಯ್ತು. ಮನೆಯವರು, ರೋಗಿಗಳು ಜಿಲ್ಲಾಡಳಿತದ ಜೊತೆ ಸಹಕಾರ ಮಾಡಬೇಕು. ಕೋವಿಡ್ ಕೇರ್ ಸೆಂಟರ್ ದಾಖಲಾತಿ ಸಂದರ್ಭ ಸ್ಥಳೀಯಾಡಳಿತ ಜೊತೆ ಜನರು ಸಹಕಾರ ಮಾಡಬೇಕು ಎಂದು ವಿನಂತಿ ಮಾಡಿದರು.ಕೋವಿಡ್ ನಿಯಂತ್ರಣ ಕ್ಕೆ ಇದು ಸೂಕ್ತ ಎಂದು ಅಧಿಕಾರಿಗಳು, ಪ್ರತಿನಿಧಿಗಳ ತೀರ್ಮಾನಿಸಿದ್ದೇವೆ. ಜಿಲ್ಲೆಯಲ್ಲಿ 2000 ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಸಿದ್ಧವಿದೆ. ಹೆಬ್ರಿ, ಕಾರ್ಕಳ, ಉಡುಪಿ, ಕುಂದಾಪುರ ಆಕ್ಸಿಜನ್ ಉತ್ಪಾಧಕಾ ಘಟಕ ಸ್ಥಾಪನೆಯಾಗಿದೆ. ಒಂದು ವಾರದೊಳಗೆ ಕಾಮಗಾರಿ ಪೂರ್ಣ ಆಗಲಿದೆ. ಎಲ್ಲಾ ಯಂತ್ರೋಪಕರಣ ಬಂದಿದ್ದು ವಾರದೊಳಗೆ ಘಟಕ ಪೂರ್ಣಗೊಳಿಸುತ್ತೇವೆ ಎಂದರು.ಉಡುಪಿ ಶಾಸಕ ರಘುಪತಿ ಭಟ್, ಬೈಂದೂರು ಶಾಸಕ ಸುನೀಲ್ ಕುಮಾರ್ , ಡಿಸಿ ಜಿ. ಜಗದೀಶ್, ಸಿಇಒ ನವೀನ್ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಎಸ್ ಪಿ ವಿಷ್ಣುವರ್ಧನ್ ಇದ್ದರು.






 Advertisement 




Sign in to your account
Username or Email Address


Password

 Remember Me


