ಚಾಮರಾಜನಗರ: ಕೊರೊನಾ ನೆಗೆಟಿವ್ ವರದಿ ಇಲ್ಲದೆ ಒಂದು ವಾಹನವನ್ನು ಜಿಲ್ಲೆಯೊಳಗೆ ಬಿಟ್ಟರೂ ಸಸ್ಪೆಂಡ್ ಮಾಡಬೇಕಾಗುತ್ತೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ತಮಿಳುನಾಡು-ಕರ್ನಾಟಕ ಚೆಕ್ ಪೋಸ್ಟ್ ಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಕರ್ನಾಟಕ-ತಮಿಳುನಾಡು ಗಡಿ ಭಾಗದ ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ್ದ ಸಚಿವ ಸೋಮಶೇಖರ್ ಕೊರೊನಾ ನೆಗೆಟಿವ್ ವರದಿ ಇಲ್ಲದಿದ್ದರೆ ಗಡಿಯಿಂದ ವಾಪಸ್ ಕಳುಹಿಸಿ ಎಂದು ತಿಳಿಸಿದರು.ನಾನು ಯಾವ ಸಮಯದಲ್ಲಿ ಬೇಕಾದರೂ ಬಂದು ಪರಿಶೀಲನೆ ನಡೆಸುತ್ತೇನೆ. ಚೆಕ್ ಪೋಸ್ಟ್ ದಾಟಿ ಬಂದ ವಾಹನವನ್ನು ಪರಿಶೀಲಿಸಿದಾಗ ನೆಗೆಟಿವ್ ವರದಿ ಇಲ್ಲದಿದ್ದರೆ ನೀವೇ ಜವಾಬ್ದಾರರು. ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು. ಕಟ್ಟುನಿಟ್ಟಿನ ಬಂದೋಬಸ್ತ್ ಮಾಡಬೇಕು ಎಂದು ಸಚಿವ ಸೋಮಶೇಖರ್ ಖಡಕ್ ಸೂಚನೆ ನೀಡಿದರು.Sign in to your account
Username or Email Address


Password

 Remember Me


