ಕೊಪ್ಪಳ: ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಈ ಸಂದರ್ಭದಲ್ಲಿ ಹಲವು ಬಿಜೆಪಿ ಶಾಸಕರು ಸಚಿವಾಕಾಂಕ್ಷಿಯಾಗಿದ್ದರು. ಇದರಲ್ಲಿ ಕೆಲವರಿಗೆ ಅಸಮಾಧಾನ ಉಂಟಾಗಿದೆ. ಈ ಮಧ್ಯೆ ಕೊಪ್ಪಳ ಜಿಲ್ಲೆಯಲ್ಲಿ ಮೂರು ಜನ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಅದರಲ್ಲಿ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಹೈಕಮಾಂಡ್, ಸಿಎಂ ಜಿಲ್ಲೆಯಿಂದ ಹಾಲಪ್ಪ ಆಚಾರರನ್ನು ಸಚಿವರನ್ನಾಗಿ ಮಾಡಿದ್ದಾರೆ. ಈ ನಿರ್ಧಾರವನ್ನು ಪರಣ್ಣ ಮುನವಳ್ಳಿ ಸ್ವಾಗತಿಸಿದ್ದಾರೆ.ಇಂದು ಗಂಗಾವತಿಯಲ್ಲಿ ಮಾತನಾಡಿದ ಪರಣ್ಣ ಮುನವಳ್ಳಿ, ನಾನು ಸಚಿವ ಆಕಾಂಕ್ಷಿಯಾಗಿದ್ದೆ ಆದರೆ ಹೈಕಮಾಂಡ್, ಸಿಎಂ ತೆಗೆದುಕೊಂಡ ನಿರ್ಧಾರಕ್ಕೆ ಸ್ವಾಗತಿಸುತ್ತೇನೆ. ಎಂ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧ, ಈ ಮಧ್ಯೆ ಕೊಪ್ಪಳ ಜಿಲ್ಲೆಗೆ ಸಚಿವ ಸ್ಥಾನ ನೀಡಿದ್ದು ಸ್ವಾಗತ ಎಂದರು.ನಾನು ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಸಹಜವಾಗಿ ಸಚಿವ ಸ್ಥಾನ ಕೇಳಿದ್ದು ಸತ್ಯ, ಈಗ ಸಚಿವ ಸ್ಥಾನ ನೀಡದೆ ಇರುವುದಕ್ಕೆ 2-3 ದಿನ ಅಸಮಾಧಾನವಾಗುವುದು ಸಹಜ. ಹಾಗಂತ ಯಾವುದೇ ಪಕ್ಷದ ವಿರೋಧ ಚಟುವಟಿಕೆ ಮಾಡುವುದಿಲ್ಲ. ರಾಜ್ಯದಲ್ಲಿ ಇನ್ನೂ 3-4 ಸಚಿವ ಸ್ಥಾನ ಖಾಲಿ ಇವೆ. ಅವುಗಳಲ್ಲಿ ಕೇಳುವ ಬಗ್ಗೆ ವಿಚಾರ ಮಾಡಿಲ್ಲ. ಸಚಿವ ಸ್ಥಾನ ಸಿಗದಿದ್ದರೂ ಕ್ಷೇತ್ರದ ಜನರು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಪರಣ್ಣ ಮುನವಳ್ಳಿ ಹೇಳಿದ್ದಾರೆ.Sign in to your account
Username or Email Address


Password

 Remember Me


