ಚಿತ್ರದುರ್ಗ: ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪರ ಗೊಲ್ಲ ಗುರುಪೀಠದ ಶ್ರೀ ಕೃಷ್ಣಯಾದವಾನಂದ ಸ್ವಾಮೀಜಿ ಧ್ವನಿ ಎತ್ತಿದ್ದಾರೆ. ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಗೊಲ್ಲ ಸಮುದಾಯವನ್ನು ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಸರ್ಕಾರ ಆಸೆ ತೋರಿಸಿ ಆಚೆ ನೂಕುವ ಧೋರಣೆ ಮಾಡುತ್ತಿದೆ. ಜಾತಿ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಕೇವಲ ಲಿಂಗಾಯಿತ ಮತ್ತಿತರೆ ಮುಂದುವರೆದ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹಿಂದುಳಿದ ಗೊಲ್ಲ ಸಮುದಾಯವನ್ನು ಕಡೆಗಣನೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೈ ತಪ್ಪಿದ ಸಚಿವ ಸ್ಥಾನ – ರೇಣುಕಾಚಾರ್ಯ ಕಣ್ಣೀರುರಾಜ್ಯದಲ್ಲಿ ನಡೆಯುವ ಪ್ರತಿ ಚುನಾವಣೆ ವೇಳೆ ಆಸೆ ತೋರಿಸಿ ಗೊಲ್ಲ ಸಮುದಾಯವನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದು ಅನ್ಯಾಯ ಮಾಡುತ್ತಿರುವ ಸರ್ಕಾರ ನಾಮಕಾವಸ್ಥೆಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮ ಘೋಷಿಸಿದೆ. ಆ ಅಭಿವೃದ್ಧಿ ನಿಗಮಕ್ಕೆ ನಯಾಪೈಸ ಹಣ ಬಿಡುಗಡೆ ಮಾಡದೇ ವಂಚಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.ನಮ್ಮ ಸಮುದಾಯಕ್ಕೆ ನ್ಯಾಯ ನೀಡದ ಸರ್ಕಾರದ ವಿರುದ್ಧ ಸಮುದಾಯದಿಂದ ಹೋರಾಟಕ್ಕೆ ಮುಂದಾಗಲಿದ್ದೇವೆ. ಶೀಘ್ರದಲ್ಲೇ ಆಗಿರುವ ಅನ್ಯಾಯ ಸರಿಪಡಿಸದಿದ್ದರೆ ಸಮುದಾಯದ ವತಿಯಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ನಮ್ಮ ಹಕ್ಕನ್ನು ಪಡೆಯುತ್ತೇವೆಂದು ಎಚ್ಚರಿಸಿದ್ದಾರೆ.Sign in to your account
Username or Email Address


Password

 Remember Me


