ಚಿಕ್ಕೋಡಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು ಇದು ಆತ್ಮಹತ್ಯೆಯಲ್ಲ (Suicide) ಕೊಲೆ (Murder) ಎಂಬ ಆರೋಪ ಕೇಳಿ ಬಂದಿದೆ.ಬೆಳಗಾವಿ (Belagavi) ಜಿಲ್ಲೆಯ ರಾಯಭಾಗ ತಾಲೂಕಿನ ಯಬರಟ್ಟಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದ್ದು ಗ್ರಾಮದ 25 ವರ್ಷದ ಯುವಕ ಪ್ರವೀಣ್ ಒಡೆಯರ ಮಂಗಳವಾರ ರಾತ್ರಿ ಮನೆಯಿಂದ ಗೆಳೆಯರೊಂದಿಗೆ ಹೋಗಿದ್ದು ಶವವಾಗಿ ಪತ್ತೆಯಾಗಿದ್ದಾನೆ. ಮನೆಯಲ್ಲಿ ಯಾವುದೇ ಮನಸ್ತಾಪ ಇಲ್ಲದೇ ಸಂತೋಷದಲ್ಲಿದ್ದ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಇತನನ್ನು ಯಾರೋ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಗೋಲ್ಮಾಲ್ ಆರೋಪ – ಲೋಕಾಯುಕ್ತಕ್ಕೆ ದೂರುಸ್ಥಳಕ್ಕೆ ಹಾರೋಗೇರಿ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದು ಹಾರೋಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


