ಬೆಂಗಳೂರು: ಇಂದಿನಿಂದ ಆಗಸ್ಟ್ 1 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ನಿರ್ದೇಶಕರಾದ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.ಇಂದು ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ರಾಜ್ಯಾದ್ಯಂತ ಮಾನ್ಸೂನ್ ದುರ್ಬಲವಾಗಿದ್ರೂ ಉತ್ತರ ಕನ್ನಡ ಜಿಲ್ಲೆಯ ಕಾರ್ಕಳದಲ್ಲಿ 4 ಸೆಂ.ಮೀ ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 3 ಸೆಂ.ಮೀ ಮಳೆಯಾಗಿದೆ.ಕರಾವಳಿ ಪ್ರದೇಶದಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಜುಲೈ 28 ರಿಂದ ಆಗಸ್ಟ್ 1ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ಸಂಭವವಿದೆ ಎಂದು ಸಿ.ಎಸ್.ಪಾಟೀಲ್ ಹೇಳಿದ್ದಾರೆ.ಬೆಂಗಳೂರು ನಗರದ ಹವಾಮಾನ ಮುನ್ಸೂಚನೆ:
ರಾಜಧಾನಿಯಲ್ಲಿ ಮುಂದಿನ ಎರಡು ದಿನದವರೆಗೆ ಕೆಲವು ಕಡೆ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆ. ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಂ. ದಾಖಲಾಗಿದೆ ಎಂದು ತಿಳಿಸಿದ್ದಾರೆ.Sign in to your account
Username or Email Address


Password

 Remember Me


