ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ, ಹೇಳಿಕೆ ಕೊಡುವಂತಹ ಹಕ್ಕು, ಅವಕಾಶಗಳಿವೆ. ಅದರಂತೆ ಸ್ವಾಮೀಜಿಗಳು, ಹಿರಿಯರು ತಮ್ಮ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರೆ, ಅದನ್ನು ಗೌರವಿಸಬೇಕಾದ್ದು ಅನಿವಾರ್ಯ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀನಿವಾಸ ಪೂಜಾರಿ ಅವರು, ಭಾರತೀಯ ಜನತಾ ಪಾರ್ಟಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ, ನಮ್ಮನ್ನು ಬೆಳೆಸಿದ ಪಾರ್ಟಿ, ಪಾರ್ಟಿಯನ್ನು ಕಟ್ಟಿ ಬೆಳೆಸಿದ ಹಿರಿಯರು ನಮಗೆ ಅವರ ಅನುಭವದ ಮಾರ್ಗದರ್ಶನ ಮಾಡಿ, ನಮ್ಮ ಕೆಲಸಗಳಿಗೆ ಪ್ರೇರಣೆ ನೀಡಿ, ನಮ್ಮಂತಹ ಸಾಮಾನ್ಯ ಕಾರ್ಯಕರ್ತರಿಗೆ ಬಹುದೊಡ್ಡ ಜವಾಬ್ದಾರಿಗಳನ್ನು ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಂತ ಹಂತವಾಗಿ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಕೋಟನಾನು ಮತ್ತು ನನ್ನಂಥವರು, ನಮ್ಮ ಹಿರಿಯರು, ನಮ್ಮ ಹೈಕಮಾಂಡ್, ನಮ್ಮ ಪಕ್ಷ, ನಮ್ಮ ರಾಜ್ಯಾಧ್ಯಕ್ಷರು, ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಮಾತ್ರ ನಾವು ಬದ್ಧ. ಯಾರ್ಯಾರು ಏನೇನು ಹೇಳಿಕೆ ನೀಡುತ್ತಾರೋ ಅದನ್ನು ಗೌರವಿಸೋಣ. ಅವರಿಗೂ ಕೂಡ ಹೇಳಿಕೆ ನೀಡುವ ಹಕ್ಕಿದೆ ಎಂದು ಸಮರ್ಥಿಸಿಕೊಂಡರು.






 Advertisement 




Sign in to your account
Username or Email Address


Password

 Remember Me


