ಯಾದಗಿರಿ: ಜನರು ಯಾವುದೇ ಕಾರಣಕ್ಕೂ ನದಿ ತೀರಕ್ಕೆ ತೆರಳಬಾರದು, ನದಿ ತೀರದ ಜನ ಧೈರ್ಯವಾಗಿರಬೇಕು, ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ ಜನರಿಗೆ ಧೈರ್ಯ ತುಂಬಿದ್ದಾರೆ.ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಹೊರ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ ವೀಡಿಯೋ ಸಂವಾದ ನಡೆಸಿ ಮಾತನಾಡಿದ ರಾಗಾಪ್ರಿಯಾ, ಜಲಾಶಯದಿಂದ ಕೃಷ್ಣಾ ನದಿಗೆ ಇಂದು ಸಂಜೆ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಪ್ರವಾಹ ಹೆಚ್ಚಾದರೆ ನದಿ ತೀರದ 16 ಗ್ರಾಮಗಳ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಕ್ಕೆ ನಿರ್ಧಾರ ಮಾಡಲಾಗಿದೆ. ಒಟ್ಟು 13 ಕಾಳಜಿ ಕೇಂದ್ರ ಆರಂಭ ಮಾಡಲಾಗುತ್ತದೆ, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಡಿಸಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಯಾದಗಿರಿಯಲ್ಲಿ ಭಾರೀ ಮಳೆ- ಕೊಚ್ಚಿಹೋದ ಮಲಕಪ್ಪನಳ್ಳಿ ರಸ್ತೆಕೃಷ್ಣಾ ನದಿಪಾತ್ರದಲ್ಲಿರುವ 16 ಗ್ರಾಮದಲ್ಲಿ ಪ್ರವಾಹ ಆತಂಕ ಹಿನ್ನೆಲೆಯಲ್ಲಿ ನದಿ ದಡಕ್ಕೆ ಯಾರು ಹೋಗದಂತೆ ಮತ್ತು ಪಂಪ್ ಸೆಟ್, ಪೈಪ್ ಹಾಗೂ ಯಾವುದೇ ಕೃಷಿ ಉಪಕರಣಗಳಿಗಾಗಿ ನದಿ ದಡಕ್ಕೆ ಹೋಗಬಾರದೆಂದು ಡಂಗೂರ ಸಾರುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಜನ ಎಚ್ಚರಿಕೆಯಿಂದ ಇರಬೇಕು ಜಿಲ್ಲಾಡಳಿತ ಸದಾ ನಿಮ್ಮೊಂದಿಗೆ ಇದೆ ಎಂದು ಅಭಯ ನೀಡಿದರು.






 Advertisement 




Sign in to your account
Username or Email Address


Password

 Remember Me


