ಬೆಂಗಳೂರು: ರಾಷ್ಟ್ರೀಯ ಮಟ್ಟದ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೆಚ್ಚು ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯಲು ಮಾರ್ಗದರ್ಶನ ನೀಡುವುದಕ್ಕೆ ರಾಜ್ಯ ಸರ್ಕಾರವು ದೇಶದ ಹೆಸರಾಂತ ಆನ್‍ಲೈನ್ ಕಲಿಕಾ ವೇದಿಕೆ ‘ಅನ್ ಅಕಾಡೆಮಿ’ ಜೊತೆ ಒಪ್ಪಂದ ಮಾಡಿಕೊಂಡಿದೆ.ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರ ಸಮಕ್ಷಮದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಪ್ರಭಾಕರ್ ಹಾಗೂ ಅನ್ ಅಕಾಡೆಮಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿವೇಕ್ ಸಿನ್ಹಾ ಒಪ್ಪಂದಕ್ಕೆ ಸಹಿ ದಾಖಲೆಗಳನ್ನು ವಿನಿಮಯ ಮಾಡಿಕೊಂಡರು.ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಈ ಒಪ್ಪಂದವು ಮೂರು ವರ್ಷ, ಅಂದರೆ 2021ರಿಂದ 2024ರವರೆಗೆ ಜಾರಿಯಲ್ಲಿರುತ್ತದೆ. ಈ ಮೂರು ವರ್ಷಗಳ ಅವಧಿಯಲ್ಲಿ ಪ್ರತೀ ವರ್ಷ 1,500 ವಿದ್ಯಾರ್ಥಿಗಳಂತೆ ಒಟ್ಟು 4,500 ವಿದ್ಯಾರ್ಥಿಗಳಿಗೆ ಅನ್ ಅಕಾಡೆಮಿ ಉಚಿತ ತರಬೇತಿ ನೀಡಲಿದೆ. ಪ್ರತಿ 6 ತಿಂಗಳಿಗೊಮ್ಮೆ ಆನ್‍ಲೈನ್ ಪರೀಕ್ಷೆಗಳನ್ನು ನಡೆಸಿ ಅದರಲ್ಲಿ ಆಯ್ಕೆಯಾಗುವ 750 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು ಹಾಗೂ ಆ ವಿದ್ಯಾರ್ಥಿಗಳನ್ನು ಯಾವುದೇ ಶುಲ್ಕವಿಲ್ಲದೆ ಅನ್ ಅಕಾಡೆಮಿ ಚಂದಾದಾರರನ್ನಾಗಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನಾನು ಸನ್ಯಾಸತ್ವ ಪಡೆದಿಲ್ಲ: ಚೈತ್ರಾ ಕೊಟ್ಟೂರು ಸ್ಪಷ್ಟನೆಸರ್ಕಾರಿ ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್, ಪಾಲಿಟೆಕ್ನಿಕ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಿಮ ವರ್ಷ ಅಥವಾ ಫ್ರೀ ಫೈನಲ್ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳು ಆಗಿದ್ದು, ಪ್ರಸ್ತುತ ಕೇಂದ್ರ ಆಡಳಿತ ಸೇವೆ, ಬ್ಯಾಂಕಿಂಗ್, ಗ್ರೂಪ್ ಸಿ ಸೇರಿದಂತೆ ವಿವಿಧ ವಲಯಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳಿಗೆ ಪ್ರತಿ ವರ್ಷ ಕೇಂದ್ರ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳುತ್ತಿದೆ. ಆದರೆ ಈ ಆಯ್ಕೆಯಲ್ಲಿ ಕನ್ನಡದ ವಿದ್ಯಾರ್ಥಿಗಳು ಹಿಂದೆ ಬೀಳುತ್ತಿದ್ದಾರೆ. ಇದನ್ನು ಸರಿಪಡಿಸುವ ಉದ್ದೇಶದಿಂದ ಅನ್ ಅಕಾಡೆಮಿ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಕೋಚಿಂಗ್ ಮೂಲಕ ನಮ್ಮ ವಿದ್ಯಾರ್ಥಿಗಳ ಪರೀಕ್ಷಾ ಸಾಮಥ್ರ್ಯ ಹೆಚ್ಚಿಸಲಾಗುವುದು. ಉತ್ತಮ ಫಲಿತಾಂಶ ಸಾಧಿಸಲಾಗುವುದು ಎಂದು ಅವರು ವಿವರಿಸಿದರು.ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಸೇರಿ ಇನ್ನು ಕೆಲ ಗಣ್ಯರು, ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.






 Advertisement 




Sign in to your account
Username or Email Address


Password

 Remember Me


