ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ತೇಕಲವಟ್ಟಿ, ಕಂಚಿಪುರ, ದುಗ್ಗಾವರ ಗ್ರಾಮಗಳಲ್ಲಿ ಮನೆಗಳ ಗೋಡೆ ಕುಸಿದಿವೆ.ಕಮಲಮ್ಮ, ನಾಗಮ್ಮ, ಅನಿತ ಹಾಗೂ ಓಂಕಾರಪ್ಪ ಮನೆ ಕಳೆದುಕೊಂಡವರು. ಜಿಟಜಿಟಿ ಮಳೆಯಿಂದಾಗಿ ನಿರಂತರವಾಗಿ ನೆನೆದು ನಾಲ್ಕು ಮನೆಗಳ ಗೋಡೆಗಳು ಕುಸಿದಿದೆ. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಈ ವಿಷಯ ತಿಳಿದ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೋಟೆನಾಡಲ್ಲಿ ಕಳೆದ ಮೂರು ದಿನಗಳಿಂದ ಸೂರ್ಯನ ದರ್ಶನವಾಗಿಲ್ಲ. ಹೀಗಾಗಿ ಚಳಿಗಾಳಿ ಮಿಶ್ರಿತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದನ್ನೂ ಓದಿ: ನಿರಂತರ ಮಳೆಗೆ ವರದಾ ನದಿಯ ಬ್ಯಾರೇಜ್ ಬಂದ್






 Advertisement 




Sign in to your account
Username or Email Address


Password

 Remember Me


