ಹಾವೇರಿ: ಮಳೆ ಹೆಚ್ಚಾಗಿರುವ ಕಾರಣದಿಂದಾಗಿ ನದಿ ಪಾತ್ರದ ಗ್ರಾಮಗಳ ಜನರಿಗೆ ಡಂಗುರ ಸಾರುವ ಮೂಲಕವಾಗಿ ಎಚ್ಚರಿಕೆಯನ್ನು ನೀಡಲಾಗಿದೆ.ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ ಬೀಳುತ್ತಿರೋ ಹಿನ್ನೆಲೆಯಲ್ಲಿ ನದಿ ಪಾತ್ರದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ಡಂಗುರ ಸಾರಲಾಗಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸುತ್ತಮುತ್ತಲಿನ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ರಟ್ಟಿಹಳ್ಳಿ ತಾಲೂಕು ಆಡಳಿತ ಸೂಚನೆ ನೀಡಿದೆ. ಇದನ್ನೂ ಓದಿ:  ಉಕ್ಕಿ ಹರಿಯುವ ವೇದಗಂಗಾ ನದಿಯಲ್ಲಿ ಯುವಕರ ಹುಚ್ಚಾಟಕುಮುದ್ವತಿ ನದಿಗೆ ಭರಪೂರ ನೀರು ಬರುತ್ತಿದೆ. ನದಿಗೆ ನೀರು ಬರುತ್ತಿರೋದರಿಂದ ನದಿ ಪಾತ್ರದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕು. ನದಿ ಹತ್ತಿರ ಹೋಗಬೇಡಿ ಎಂದು ರಟ್ಟೀಹಳ್ಳಿ ತಾಲೂಕು ಆಡಳಿತದಿಂದ ವಿವಿಧ ಗ್ರಾಮಗಳಲ್ಲಿ ಡಂಗುರ ಸಾರಿಸಿ, ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಮಳೆಯ ಅಬ್ಬರ ಎಲ್ಲಡೆ ಹೆಚ್ಚಾಗಿದೆ. ಜನರು ಆದಷ್ಟು ಮುನ್ನೆಚ್ಚರಿಕೆಯಿಂದ ಇರಬೇಕಾಗಿದೆ.Sign in to your account
Username or Email Address


Password

 Remember Me


