ಚಾಮರಾಜನಗರ: ಸಿಎಂ ಯಡಿಯೂರಪ್ಪ ಬದಲಾವಣೆ ಸೂಕ್ತ ತೀರ್ಮಾನವಲ್ಲ. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿದರೆ ರಾಜ್ಯ ಅಭಿವೃದ್ಧಿ ಪಥದಲ್ಲಿ ನಡೆಯಲಿದೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಬೇಕು, ಅವರ ಬದಲಾವಣೆ ಸರಿಯಲ್ಲ. ಅನುಭವಿ ರಾಜಕಾರಣಿಯಾಗಿರುವ ಯಡಿಯೂರಪ್ಪ ಅವರನ್ನು ಬದಲಿಸಿ ಬೇರೆಯವರನ್ನು ತಂದು ಕೂರಿಸಿದರೆ ಆಡಳಿತದ, ಕ್ಷೇತ್ರಗಳ ಪರಿಚಯ ಪಡೆದುಕೊಳ್ಳಲು 6-7 ತಿಂಗಳು ಬೇಕಾಗಲಿದೆ. ಉಳಿದ ಕೇವಲ ಎರಡು ವರ್ಷದಲ್ಲಿ ಈ 6-7 ತಿಂಗಳು ವೇಸ್ಟ್ ಆಗಲಿದೆ. ಅನುಭವಿ ಯಡಿಯೂರಪ್ಪ ಅವರೇ ಮುಂದುವರಿದರೆ ರಾಜ್ಯ ಅಭಿವೃದ್ಧಿ ಪಥದಲ್ಲಿ ನಡೆಯಲಿದೆ ಎಂದಿದ್ದಾರೆ.ಕೊರೊನಾ, ಪ್ರವಾಹವನ್ನು ಸಮರ್ಥವಾಗಿ ಎದುರಿಸಿದ್ದಾರೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಯಡಿಯೂರಪ್ಪ ಅವರನ್ನು ಮುಂದುವರಿಸಬೇಕು. ಒಂದು ವೇಳೆ ಬದಲಾವಣೆಯಾದರೆ ಅಭಿವೃದ್ಧಿ ಕುಂಠಿತವಾಗಲಿದೆ ಎಂದು ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ಇದನ್ನೂ ಓದಿ:‘ನನ್ನವರೇ ನನಗೆ ಶತ್ರುವಾದ್ರು..’ – ಆಪ್ತರ ಬಳಿ ಬಿಎಸ್‍ವೈ ಭಾವುಕ..!






 Advertisement 




Sign in to your account
Username or Email Address


Password

 Remember Me


