ಬೆಂಗಳೂರು: ರಾಜಧಾನಿಯಲ್ಲಿ (Bengaluru Rains) ಇಂದು ಧಾರಾಕಾರ ಮಳೆ ಸುರಿಯುತ್ತಿದೆ. ಬೆಳಗ್ಗೆಯಿಂದಲೂ ಬಿಟ್ಟು ಬಿಡದೇ ಮಳೆಯಾಗುತ್ತಿದೆ.ವಿಧಾನಸೌಧ, ಕೆ.ಆರ್. ಮಾರ್ಕೆಟ್, ಮೆಜೆಸ್ಟಿಕ್, ಮಲ್ಲೇಶ್ವರ, ಯಶವಂತಪುರ, ಮತ್ತಿಕೆರೆ, ಗೊರುಗುಂಟೆಪಾಳ್ಯ ಸುತ್ತಮುತ್ತ ಮಳೆಯಾಗುತ್ತಿದೆ. ಇದನ್ನೂ ಓದಿ: ಪೆನ್‍ಡ್ರೈವ್ ಕೇಸ್‍ನಲ್ಲಿ ಹೊಸ ಆಡಿಯೋ ಔಟ್- ಕೇಸ್‍ಗೆ ಸಿಗುತ್ತಾ ಟ್ವಿಸ್ಟ್?ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಗಾಂಧಿನಗರ, ಟೌನ್‌ಹಾಲ್, ಕೆ.ಜಿ. ರೋಡ್ ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಮುಂಗಾರು ಪೂರ್ವ ಮಳೆಯಿಂದಾಗಿ ಬೆಂಗಳೂರು ಕೂಲ್ ಕೂಲ್ ಎನಿಸಿದೆ.ನಗರದ ಹಲವು ಭಾಗಗಳಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಕೆಲವು ಕಡೆ ಹನಿ ಮಳೆಯಾಗುತ್ತಿತ್ತು. ಆದರೆ ಸಾಯಂಕಾಲ ಆಗುತ್ತಿದ್ದಂತೆ ಮಳೆ ಅಬ್ಬರ ಜೋರಾಯಿತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಇದನ್ನೂ ಓದಿ: ಗ್ರೌಂಡ್‌ ಹೊರಗೂ ದಾಖಲೆ ಬರೆದ ನಾಕೌಟ್‌ ಕದನ – ಆರ್‌ಸಿಬಿಗೆ ಮುಂದಿರುವ ಕಠಿಣ ಸವಾಲುಗಳೇನು?ಸಂಚಾರ ಸಲಹೆಕಸ್ತೂರಿ ನಗರ ಕಡೆಯಿಂದ M M T ಜಂಕ್ಷನ್ (ಕೆ ಆರ್ ಪುರ) ಕಡೆಗೆ ಹೋಗುವ ಮಾರ್ಗದಲ್ಲಿ ಎಂ. ಎಂ. ಟಿ ಬಸ್ ನಿಲ್ದಾಣದ ಹತ್ತಿರ ಮಳೆ ನೀರು ನಿಂತಿರುವುದರಿಂದ ವೈಟ್‌ಫೀಲ್ಡ್‌, ಮಹದೇವಪುರ ಮತ್ತು ಕೆ ಆರ್ ಪುರ ಕಡೆಗೆ ಹೋಗುವ ವಾಹನಗಳ ಸಂಚಾರ ನಿಧಾನಗತಿಯಲ್ಲಿರುತ್ತದೆ. ಇದನ್ನು ಶೀಘ್ರವೇ ತೆರವುಗೊಳಿಸಲಾಗುತ್ತಿದ್ದು
ಸಹಕರಿಸಲು ಕೋರಿದೆ pic.twitter.com/A4lG0O1juJ— K.R.PURA TRAFFIC POLICE.BENGALURU. (@KRPURATRAFFIC) May 19, 2024ಕಸ್ತೂರಿ ನಗರ ಕಡೆಯಿಂದ ಎಂಎಂಟಿ ಜಂಕ್ಷನ್ (ಕೆ.ಆರ್.ಪುರ) ಕಡೆಗೆ ಹೋಗುವ ಮಾರ್ಗದಲ್ಲಿ ಎಂಎಂಟಿ ಬಸ್ ನಿಲ್ದಾಣದ ಹತ್ತಿರ ಮಳೆ ನೀರು ನಿಂತಿರುವುದರಿಂದ ವೈಟ್‌ಫೀಲ್ಡ್, ಮಹದೇವಪುರ ಮತ್ತು ಕೆ.ಆರ್. ಪುರ ಕಡೆಗೆ ಹೋಗುವ ವಾಹನಗಳ ಸಂಚಾರ ನಿಧಾನಗತಿಯಲ್ಲಿರುತ್ತದೆ. ಇದನ್ನು ಶೀಘ್ರವೇ ತೆರವುಗೊಳಿಸಲಾಗುತ್ತಿದ್ದು, ಸಹಕರಿಸಲು ಜನರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.ನೆಲಮಂಗಲ ಸುತ್ತಮುತ್ತ ಜೋರು ಮಳೆಯಾಗಿದೆ. ಗುಡುಗು-ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡಿದ್ದಾರೆ. ನೆಲಮಂಗಲ ತಾಲೂಕಿನ ಮೆಳೇಕತ್ತಿಗನೂರು ಗ್ರಾಮದಲ್ಲಿ ಸಿಡಿಲಿಗೆ ರೈತ ಬಲಿಯಾಗಿದ್ದಾನೆ. ಇದನ್ನೂ ಓದಿ: ಆರ್‌ಸಿಬಿ ಪ್ಲೇ-ಆಫ್‌ ಎಂಟ್ರಿ ಕ್ಷಣದಲ್ಲಿ ಭಾವುಕರಾದ ವಿರಾಟ್‌, ಅನುಷ್ಕಾಯಲಹಂಕ, ನ್ಯೂ ಟೌನ್, ದೊಡ್ಡಬಳ್ಳಾಪುರ ಮುಖ್ಯರಸ್ತೆ, ಪುಟ್ಟೇನಹಳ್ಳಿ, ಏರ್ಪೋಟ್ ರೋಡ್, ಅನಂತಪುರ ಭಾಗದಲ್ಲಿ ಜೋರು ಮಳೆಯಾಗಿದೆ. ಸದ್ಯ ನಗರದಲ್ಲಿ ಮುಂದಿನ ನಾಲ್ಕು ದಿನ ಹವಾಮಾನ ಇಲಾಖೆ ಮಳೆ ಎಚ್ಚರಿಕೆ ನೀಡಿದೆ.Sign in to your account
Username or Email Address


Password

 Remember Me


