ವಿಜಯಪುರ: ಮಕ್ಕಳಿಲ್ಲವೆಂದು ಎಷ್ಟೋ ಮಂದಿ ಕೊರಗುತ್ತಾರೆ. ಈ ನಡುವೆ ಮಹಿಳೆಯೊಬ್ಬಳು ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳ ದಾರುಣ ಸಾವುಮಹಿಳೆ ಮೃತಪಟ್ಟ ನವಜಾತ ಶಿಶುವನ್ನು ಪ್ಲಾಸ್ಟಿಲ್ ಹಾಳೆಯಲ್ಲಿ ಸುತ್ತಿ ಚರಂಡಿಗೆ ಎಸೆದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾಳೆ. ಇತ್ತ ಶಿಶುವನ್ನು ಗಮನಿಸಿದ ಗ್ರಾಮಸ್ಥರು ಚರಂಡಿಯಿಂದ ಗಂಡು ಮಗುವನ್ನು ಮೇಲಕ್ಕೆತ್ತಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ದೌಡಾಯಿಸಿದ ಮುದ್ದೇಬಿಹಾಳ ಪೊಲೀಸರು ತಾಯಿಗಾಗಿ ಶೋಧ ನಡೆಸಿದ್ದಾರೆ.Sign in to your account
Username or Email Address


Password

 Remember Me


