ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಇಂದು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಮನವಿ ಮಾಡಿಕೊಂಡಿದ್ದಾರೆ.ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇವಣ್ಣಗೆ (HD Revanna) ಜಾಮೀನು ಸಿಕ್ಕಿತ್ತು ಅಂತ ನಾನು ಸಂತೋಷಪಡ್ತೀನಿ ಅಂದುಕೊಳ್ಳಬೇಡಿ. ಕಾರ್ಯಕರ್ತರು ಪಟಾಕಿ ಹೊಡೆಯಬೇಡಿ. ಈ ಮೂಲಕ ಸಂಭ್ರಮ ಪಡಬೇಡಿ. ಇದು ಸಂಭ್ರಮ ಪಡುವ ಸಮಯವಲ್ಲ ಎಂದು ಮನವಿ ಮಾಡಿಕೊಂಡರು.ಘಟನೆಯ ಸತ್ಯಾಸತ್ಯತೆ ಹೊರ ಬರಬೇಕು. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಸಿಗಬೇಕು. ಆಗ ಸಂಭ್ರಮ ಮಾಡಿ. ಇದು ರಾಜ್ಯವೇ ತಲೆ ತಗ್ಗಿಸೋ ಘಟನೆ. ಪೆನ್‍ಡ್ರೈವ್ ಲೀಕ್ ಮಾಡಿರೋ ವ್ಯಕ್ತಿಯನ್ನ ಹುಡುಕಿಲ್ಲ ಎಂದು ಎಸ್‍ಐಟಿ ಅಧಿಕಾರಿಗಳ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು. ಇದನ್ನೂ ಓದಿ: ದೊಡ್ಡ ತಿಮಿಂಗಿಲ ಹಿಡಿದ್ರೆ ಎಲ್ಲಾ ಸತ್ಯ ಹೊರಬರುತ್ತೆ: ಹೆಚ್‍ಡಿಕೆ ವಾಗ್ದಾಳಿSign in to your account
Username or Email Address


Password

 Remember Me


