– ನೈರುತ್ಯ ರೈಲ್ವೆಯಿಂದ 5 ವಿಶೇಷ ರೈಲುಗಳ ಓಡಾಟಬೆಂಗಳೂರು: ಮಂಗಳವಾರ ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ (Lok Sabha Election 2024) ನಡೆಯುವ ಹಿನ್ನೆಲೆ ಉತ್ತರ ಕರ್ನಾಟಕ ಭಾಗಗಳಿಗೆ ಕೆಎಸ್‌ಆರ್‌ಟಿಸಿ (KSRTC) ಹೆಚ್ಚುವರಿ ಬಸ್‌ಗಳ ಜೊತೆಗೆ ಬಿಎಂಟಿಸಿ (BMTC) ಬಸ್‌ಗಳನ್ನು ನಿಯೋಜಿಸಿದ್ದು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿದೆ.ಮತದಾನ (Vote) ಮಾಡುವ ಸಲುವಾಗಿ ಸೋಮವಾರ ಬೆಳಗ್ಗೆಯಿಂದಲೇ ಪ್ರಯಾಣಿಕರು ತಮ್ಮ ಊರುಗಳತ್ತ ತೆರಳುತ್ತಿದ್ದು, ಭಾನುವಾರವೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಸಾಕಷ್ಟು ಜನ ತೆರಳಿದ್ದಾರೆ. ಈ ಹಿನ್ನೆಲೆ ಮತದಾರರ ಅನುಕೂಲಕ್ಕಾಗಿ ನಗರದ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲಾಗಿದೆ. ಇದನ್ನೂ ಓದಿ: ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಮಹಜರು – ಸಂತ್ರಸ್ತೆಯ ಆರೋಪ ಏನು?ಮೆಜೆಸ್ಟಿಕ್ (Mejestic) ಸುತ್ತಮುತ್ತ ಇಂದು ವಾಹನ ದಟ್ಟಣೆ ಹೆಚ್ಚುವ ಸಾಧ್ಯತೆ ಇದ್ದು, ವಾಹನ ಸವಾರರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಇಂದು ಸಂಜೆಯ ವೇಳೆಗೆ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಇಂದು ಸಹ ಬಹಳಷ್ಟು ಜನ ಮತದಾನಕ್ಕೆ ಹೋಗುವ ಸಾಧ್ಯತೆ ಇರುವುದರಿಂದ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಬಂಟ್ವಾಳದಲ್ಲಿ ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲುಮತದಾನಕ್ಕೆ ಒಳಪಡುವ ಜಿಲ್ಲೆಗಳಿಗೆ ರೈಲ್ವೆ ಇಲಾಖೆಯಿಂದ ವಿಶೇಷ ರೈಲು ಕಲ್ಪಿಸಲಾಗಿದೆ. ವಿಜಯಪುರ, ಹೊಸಪೇಟೆ, ಹುಬ್ಬಳ್ಳಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಿಗೆ ವಿಶೇಷ ರೈಲು (Train) ಸಂಚರಿಸಲಿದ್ದು, ನೈರುತ್ಯ ರೈಲ್ವೆಯಿಂದ ಒಟ್ಟು 5 ವಿಶೇಷ ರೈಲುಗಳು ಓಡಾಟ ನಡೆಸಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸಂಚಾರ ಕಲ್ಪಿಸಲಾಗಿದೆ. ಇದನ್ನೂ ಓದಿ: ಮುಂದಿನ 5 ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ






 Advertisement 




Sign in to your account
Username or Email Address


Password

 Remember Me


