ಹುಬ್ಬಳ್ಳಿ: ಹುಬ್ಬಳ್ಳಿ ನಗರಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಕೊಲೆಯಾದ ನೇಹಾ ಹಿರೇಮಠ ಕುಟುಂಬಸ್ಥರು ಬುಧವಾರ ಭೇಟಿಯಾದರು.ಹುಬ್ಬಳ್ಳಿಯಲ್ಲಿ (Hubballi) ಅಮಿತ್‌ ಶಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ವೇದಿಕೆ ಹಿಂಭಾಗ ನೇಹಾ ಹಿರೇಮಠ (Neha Hiremath) ತಂದೆ, ತಾಯಿ ಹಾಗೂ ಸಹೋದರನನ್ನು ಭೇಟಿ ಮಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕೂಡ ಪ್ರಜ್ವಲ್ ಪರ ಪ್ರಚಾರ ಮಾಡಿದ್ದಾರೆ: ಸಿ.ಟಿ.ರವಿಭೇಟಿ ಬಳಿಕ ಮಾತನಾಡಿದ ನೇಹಾ ತಂದೆ, ನಮ್ಮ ಮಗಳ ಹತ್ಯೆ ಪ್ರಕರಣದಲ್ಲಿ ಅಮಿತ್ ಶಾ ಬಹಳಷ್ಟು ಗಂಭೀರವಾಗಿದ್ದಾರೆ. ನಮ್ಮ ಜೊತೆಗೆ ಹತ್ತು ನಿಮಿಷಗಳ ಕಾಲ ಮಾತುಕತೆ ನಡೆಸಿದರು. ನಿಮ್ಮ ಪರವಾಗಿ ನಾವು ಇದ್ದೇವೆ ಅಂತಾ ಧೈರ್ಯ ಹೇಳಿದರು ಎಂದರು.ಕೊಲೆ ಆರೋಪಿಗೆ ಉಗ್ರ ಶಿಕ್ಷೆಯಾಗುವ ನಿಟ್ಟಿನಲ್ಲಿ ವಿಶೇಷ ಕಾಯ್ದೆ ತರಲು ಮನವಿ ಮಾಡಿದ್ದೇವೆ. ಈ ಬಗ್ಗೆ ಮನವಿ ಪತ್ರ ನೀಡಿದ್ದೇವೆ. ನಮ್ಮ ಮನವಿಗೆ ಅಮಿತ್‌ ಶಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಡ್ರೈವರ್‌ ಕಾರ್ತಿಕ್‌ ಮಲೇಷ್ಯಾದಲ್ಲಿದ್ದಾನೆ, ಆತನನ್ನು ಅಲ್ಲಿಗೆ ಕಳುಹಿಸಿದ್ದು ಯಾರು: ಹೆಚ್‌ಡಿಕೆ ಪ್ರಶ್ನೆSign in to your account
Username or Email Address


Password

 Remember Me


